ಶಾಲಾ ಬಸ್‌ ಕಂದಕಕ್ಕೆ ಉರುಳಿ 27 ಮಕ್ಕಳ ಸಾವು

Published : Apr 10, 2018, 07:40 AM ISTUpdated : Apr 14, 2018, 01:13 PM IST
ಶಾಲಾ ಬಸ್‌ ಕಂದಕಕ್ಕೆ ಉರುಳಿ 27 ಮಕ್ಕಳ ಸಾವು

ಸಾರಾಂಶ

ಮಕ್ಕಳನ್ನು ಮನೆಗೆ ಸಾಗಿಸುತ್ತಿದ್ದ ಶಾಲಾ ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 27 ಮಕ್ಕಳು ಸೇರಿದಂತೆ 30 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಶಿಮ್ಲಾ: ಮಕ್ಕಳನ್ನು ಮನೆಗೆ ಸಾಗಿಸುತ್ತಿದ್ದ ಶಾಲಾ ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 27 ಮಕ್ಕಳು ಸೇರಿದಂತೆ 30 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಶಾಲಾ ವಾಹನ ನುರ್ಪುರ್‌- ಚಂಬಾ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಗುರ್ಚಲ್‌ ಗ್ರಾಮದ ಸಮೀಪ ಈ ಘಟನೆ ನಡೆದಿದೆ.

ಚಾಲಕ ನಿಯಂತ್ರಣ ತಪ್ಪಿದ್ದರಿಂದ ಬಸ್‌ 100 ಅಡಿ ಆಳದ ಕಂದಕ್ಕೆ ಉರುಳಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಾವನ್ನಪ್ಪಿದ ಮಕ್ಕಳು ರಾಮ್‌ ಸಿಂಗ್‌ ಪಥಾನಿಯ ಮೆಮೋರಿಯಲ್‌ ಸ್ಕೂಲ್‌ಗೆ ಸೇರಿದವರಾಗಿದ್ದಾರೆ. ಬಸ್‌ ಚಾಲಕ ಮದನ್‌ ಲಾಲ್‌ ಮತ್ತು ಇಬ್ಬರು ಮಹಿಳಾ ಶಿಕ್ಷಕರು ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಈ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಓದುತ್ತಿದ್ದು, 10 ವರ್ಷದ ಒಳಗಿನವರಾಗಿದ್ದಾರೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಸಂತ್ರಸ್ತರ ಕುಟುಂಬಕ್ಕೆ 5 ಲಕ್ಷ ರು. ಪರಿಹಾರ ಘೊಷಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ