ಬರಪೀಡಿತ ಪಟ್ಟಿಗೆ 29 ಹೊಸ ತಾಲೂಕುಗಳ ಸೇರ್ಪಡೆ

Published : Oct 29, 2016, 03:22 PM ISTUpdated : Apr 11, 2018, 01:13 PM IST
ಬರಪೀಡಿತ ಪಟ್ಟಿಗೆ 29 ಹೊಸ ತಾಲೂಕುಗಳ ಸೇರ್ಪಡೆ

ಸಾರಾಂಶ

ನವೆಂಬರ್ 2 ರಂದು ರಾಜ್ಯಕ್ಕೆ ಬರ ಅಧ್ಯಯನ ತಂಡ ಆಗಮಿಸಲಿದ್ದು, ಮೂರು ತಂಡಗಳು ಮೂರು ದಿನ ಅಧ್ಯಯನ ನಡೆಸಲಿವೆ ಎಂದು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಬೆಂಗಳೂರು (ಅ.29): ರಾಜ್ಯದಲ್ಲಿ ಹೊಸದಾಗಿ 29 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 139ಕ್ಕೇರಿದೆ.

ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಇಂದು ಬರ ಕುರಿತ ಸಂಪುಟ ಉಪ ಸಮಿತಿ ಸಭೆ ನಡೆಸಿದರು. ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಬರದಿಂದ 12 ಸಾವರಿ ಕೋಟಿ ನಷ್ಟವಾಗಿದ್ದು, ಕೇಂದ್ರದಿಂದ 3330 ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಹಾಗೂ ಅತಿವೃಷ್ಠಿಯಿಂದ ಉಂಟಾದ ಹಾನಿಗೆ 336 ಕೋಟಿ ಪರಿಹಾರ ನೀಡುವಂತೆ ಕೇಳಿಕೊಂಡಿದ್ದೇವೆ, ಎಂದಿದ್ದಾರೆ.

ನವೆಂಬರ್ 2 ರಂದು ರಾಜ್ಯಕ್ಕೆ ಬರ ಅಧ್ಯಯನ ತಂಡ ಆಗಮಿಸಲಿದ್ದು, ಮೂರು ತಂಡಗಳು ಮೂರು ದಿನ ಅಧ್ಯಯನ ನಡೆಸಲಿವೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರ ಬರ ಪರಿಹಾರಕ್ಕೆ 350 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಕೆಲವು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಕಾಗೋಡು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿಮ್ಮ ಗ್ಯಾಸ್ ಗೀಸರ್ ಸುರಕ್ಷಿತವಾಗಿದೆಯೇ? ಈ ವಿಷಯ ತಿಳ್ಕೊಳ್ಳಿ, ದೊಡ್ಡ ಅನಾಹುತ ತಪ್ಪಿಸಿ!
ಮೈಸೂರು ಅರಮನೆ ಬಳಿ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 3ಕ್ಕೆ ಏರಿಕೆ, ಸಲೀಂ ಮೇಲೆ ಅನುಮಾನ