2ಜಿ ಹಗರಣ: ವಿಚಾರಣೆ ಮುಂದಕ್ಕೆ ಕೋರಿದಕ್ಕೆ 16000 ಮರ ನೆಡುವ ಶಿಕ್ಷೆ!

Published : Feb 08, 2019, 08:46 AM IST
2ಜಿ ಹಗರಣ: ವಿಚಾರಣೆ ಮುಂದಕ್ಕೆ ಕೋರಿದಕ್ಕೆ 16000 ಮರ ನೆಡುವ ಶಿಕ್ಷೆ!

ಸಾರಾಂಶ

ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ತಮ್ಮ ಅಭಿಪ್ರಾಯ ತಿಳಿಸಲು ಹೆಚ್ಚು ಕಾಲಾವಕಾಶ ಕೋರಿದ ಸಂಸ್ಥೆಗಳು ಹಾಗೂ ಪಿರ್ಯಾದುದಾರರ ವಿರುದ್ಧ ದೆಹಲಿ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ[ಫೆ.08]: 2ಜಿ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ತಮ್ಮ ಅಭಿಪ್ರಾಯ ತಿಳಿಸಲು ಹೆಚ್ಚು ಕಾಲಾವಕಾಶ ಕೋರಿದ ಸಂಸ್ಥೆಗಳು ಹಾಗೂ ಪಿರ್ಯಾದುದಾರರ ವಿರುದ್ಧ ದೆಹಲಿ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಇದಕ್ಕಾಗಿ ದಂಡದ ರೂಪದಲ್ಲಿ 16000 ಗಿಡಗಳನ್ನು ನೆಡುವಂತೆ ಆದೇಶಿಸಿದೆ.

ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ನ್ಯಾ. ನಜ್ಮಿ ವಜೀರಿ ಅವರು, 2ಜಿ ಹಗರಣದಿಂದ ಖುಲಾಸೆಯಾಗಿದ್ದನ್ನು ಪ್ರಶ್ನಿಸಿ ಇ.ಡಿ ಮತ್ತು ಸಿಬಿಐ ಸಲ್ಲಿಸಿದ ಅರ್ಜಿಗಳಿಗೆ ಉತ್ತರಿಸಲು ಹೆಚ್ಚಿನ ಕಾಲಾವಕಾಶ ಕೋರಿದ ಮಾಜಿ ಸಚಿವ ಎ. ರಾಜಾ, ಡಿಎಂಕೆ ನಾಯಕಿ ಕನಿಮೋಳಿ ಸೇರಿ ಇತರ ಉದ್ಯಮಿಗಳಿಗೆ ದಕ್ಷಿಣ ದೆಹಲಿಯ ರಿಡ್ಜ್‌ ಅರಣ್ಯ ಪ್ರದೇಶದಲ್ಲಿ 16000 ಗಿಡ ನೆಡುವ ದಂಡ ವಿಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್