
ನವದೆಹಲಿ[ಮೇ.26]: ಬಹುಕೋಟಿ 2ಜಿ ತರಂಗಾಂತರ ಹಗರಣದಲ್ಲಿ ಮಾಜಿ ಟೆಲಿಕಾಮ್ ಸಚಿವ ಎ. ರಾಜಾ, ಡಿಎಂಕೆ ಸಂಸದೆ ಕನ್ನಿಮೋಳಿ ಹಾಗೂ ಇತರರು ಖುಲಾಸೆಯಾಗಿರುವುದನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.
ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆ.2ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. 2ಜಿ ತರಂಗಾಂತರ ಹಂಚಿಕೆ ಪ್ರಕರಣದಿಂದ ದೇಶಕ್ಕೆ ಭಾರೀ ನಷ್ಟ ಉಂಟಾಗಿದೆ ಮತ್ತು ಈ ಪ್ರಕರಣ ದೇಶವೇ ನಾಚಿಕೆ ಪಡುವಂತಹದ್ದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹತಾ ಕೋರ್ಟ್’ನಲ್ಲಿ ವಾದಿಸಿದ್ದಾರೆ.
ಸಿಬಿಐ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಎ.ರಾಜಾ ಹಾಗೂ ಕನ್ನಿಮೋಳಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ ಈ ಸಂಬಂಧ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಆ.6ಕ್ಕೆ ನಿಗದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.