ಮಂಗಳೂರಿನಲ್ಲಿ ದೇಶದ ಎರಡನೇ ಅತಿದೊಡ್ಡ ಭೂಗತ ತೈಲ ಸಂಗ್ರಹಾಗಾರಕ್ಕೆ ಚಾಲನೆ

Published : Oct 12, 2016, 09:54 AM ISTUpdated : Apr 11, 2018, 12:50 PM IST
ಮಂಗಳೂರಿನಲ್ಲಿ ದೇಶದ ಎರಡನೇ ಅತಿದೊಡ್ಡ ಭೂಗತ ತೈಲ ಸಂಗ್ರಹಾಗಾರಕ್ಕೆ ಚಾಲನೆ

ಸಾರಾಂಶ

ಚಂದ್ರಹಾಸನಗರದಿಂದ ಪಾದೂರಿಗೆ ಪೈಪ್‌ಲೈನ್ ಅಳವಡಿಕೆ ಕಾರ್ಯ ಈಗಾಗಲೇ ಭಾಗಶ: ಮುಗಿದಿದ್ದು ಉಳಿದ ಕಾರ್ಯ ವೇಗ ಪಡೆದುಕೊಂಡಿದೆ. ಪಾದೂರು ಮತ್ತು ಚಂದ್ರಹಾಸನಗರದಲ್ಲಿ ಏಕಶಿಲೆ ದೊರೆತಿದ್ದು ಅದನ್ನು ಕೊರೆದು ಕಚ್ಛಾತೈಲವನ್ನು ಸಂಗ್ರಹಿಸಿಡುವ ಯೋಜನೆ ಇದಾಗಿದೆ.

ಮಂಗಳೂರು (ಅ.12): ದೇಶದ ಎರಡನೇ ಅತಿದೊಡ್ಡ ಭೂಗತ ತೈಲ ಸಂಗ್ರಹಾಗಾರಕ್ಕೆ ಇಂದು ಚಾಲನೆ ದೊರೆತಿದೆ. ಮಂಗಳೂರು ಹೊರವಲಯದ ಪೆರ್ಮುದೆಯಲ್ಲಿ ಸಂಸದ ನಳಿನ್‌ಕುಮಾರ್ ಕಟೀಲ್ ತೈಲಾಗಾರಕ್ಕೆ ಚಾಲನೆ ನೀಡಿದ್ದಾರೆ. ಇರಾನ್‌ನಿಂದ ಬಂದ ಕಚ್ಛಾತೈಲವನ್ನು ಇಲ್ಲಿ ಸಂಗ್ರಹ ಮಾಡಲಾಗಿದೆ.

ಮಂಗಳೂರು ಬಂದರು ಮೂಲಕ 0.26 ಮೆಟ್ರಿಕ್ ಟನ್ ತೈಲ ಇರಾನ್‌ನಿಂದ ಬಂದಿದ್ದು, ಅದನ್ನು ಇಲ್ಲಿ ಸಂಗ್ರಹಿಸಲಾಯಿತು. ಆಂಧ್ರ ಪ್ರದೇಶದ ವಿಶಾಖಪಟ್ಟಣಂ, ಉಡುಪಿಯ ಪಾದೂರು, ಬಜ್ಪೆಯ ಚಂದ್ರಹಾಸನಗರದ ತೈಲ ಸ್ಥಾವರ ದೇಶದ ಮೂರನೇ ಸ್ಥಾವರವಾಗಿದೆ.

ಚಂದ್ರಹಾಸನಗರದಿಂದ ಪಾದೂರಿಗೆ ಪೈಪ್‌ಲೈನ್ ಅಳವಡಿಕೆ ಕಾರ್ಯ ಈಗಾಗಲೇ ಭಾಗಶ: ಮುಗಿದಿದ್ದು ಉಳಿದ ಕಾರ್ಯ ವೇಗ ಪಡೆದುಕೊಂಡಿದೆ. ಪಾದೂರು ಮತ್ತು ಚಂದ್ರಹಾಸನಗರದಲ್ಲಿ ಏಕಶಿಲೆ ದೊರೆತಿದ್ದು ಅದನ್ನು ಕೊರೆದು ಕಚ್ಛಾತೈಲವನ್ನು ಸಂಗ್ರಹಿಸಿಡುವ ಯೋಜನೆ ಇದಾಗಿದೆ.

ದೇಶದ ಸುರಕ್ಷತೆ ಹಾಗೂ ಭದ್ರತೆಯ ದೃಷ್ಟಿಯಿಂದ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

ದೇಶದ ಮೂರು ಘಟಕಗಳಲ್ಲಿ 15 ದಿನಕ್ಕೆ ಆಗುವಷ್ಟು ತೈಲ ಸಂಗ್ರಹ ಸಾಮರ್ಥ್ಯದ ವ್ಯವಸ್ಥೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka By-Election Results 2026 LIVE: ಇಂದು ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ; ಕಾಂಗ್ರೆಸ್-ಬಿಜೆಪಿ ನಡುವೆ ಬಿಗ್ ಫೈಟ್
5 States Assembly Election Results 2026: ಇಂದು 5 ರಾಜ್ಯಗಳ ವಿಧಾನಸಭಾ ಫಲಿತಾಂಶ: ಪಂಚ ಗದ್ದುಗೆ ಯಾರಿಗೆ?