ಆಕ್ಸಿಜನ್‌ ಕೊರತೆ: ಛತ್ತೀಸ್’ಗಢದಲ್ಲಿ ಮೂವರು ಮಕ್ಕಳು ಸಾವು

Published : Aug 21, 2017, 05:00 PM ISTUpdated : Apr 11, 2018, 01:10 PM IST
ಆಕ್ಸಿಜನ್‌ ಕೊರತೆ: ಛತ್ತೀಸ್’ಗಢದಲ್ಲಿ ಮೂವರು ಮಕ್ಕಳು ಸಾವು

ಸಾರಾಂಶ

ಉತ್ತರ ಪ್ರದೇಶದ ಗೋರಖ್‌‌’ಪುರದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದಾಗಿ 71 ಮಕ್ಕಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಛತ್ತೀಸ್’ಗಢದಲ್ಲಿ ಅಂತಹುದೇ ಘಟನೆ ನಡೆದಿದ್ದು ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ.

ರಾಯಪುರ: ಉತ್ತರ ಪ್ರದೇಶದ ಗೋರಖ್‌‌’ಪುರದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದಾಗಿ 71 ಮಕ್ಕಳು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಛತ್ತೀಸ್’ಗಢದಲ್ಲಿ ಅಂತಹುದೇ ಘಟನೆ ನಡೆದಿದ್ದು ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ.

ರಾಯಪುರದಲ್ಲಿನ ಡಾ.ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಸಂಬಂಧ ಆಸ್ಪತ್ರೆಯ ಸಿಬ್ಬಂದಿ ರವಿಚಂದ್ರ ಅವರನ್ನು ಬಂಧಿಸಲಾಗಿದ್ದು, ಕೆಲಸದಿಂದ ಅಮಾನತು ಮಾಡಲಾಗಿದೆ.

ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದ ರವಿಚಂದ್ರ ಅವರು, ಮದ್ಯದ ನಿಶೆಯಲ್ಲಿ ಆಮ್ಲಜನಕ ಪೂರೈಕೆಯನ್ನು ಸ್ಥಗಿತಗೊಳಿಸಿ ನಿದ್ದೆ ಮಾಡಿದ್ದಾರೆ. ಈತ ಮಾಡಿದ ಎಡವಟ್ಟಿನಿಂದ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಛತ್ತೀಸ್’ಗಢ ಮುಖ್ಯಮಂತ್ರಿ ರಮಣ್​ಸಿಂಗ್ ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಕಳೆದ ವಾರ ಉತ್ತರ ಪ್ರದೇಶದ ಗೋರಖಪುರದ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 70 ಮಕ್ಕಳು ಮೃತಪಟ್ಟ ಘಟನೆ ರಾಷ್ಟ್ರವ್ಯಾಪಿ ಚರ್ಚೆಗೆ ಗ್ರಾಸವಾಗಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಸಂಸದ ಬೊಮ್ಮಾಯಿ