ONGC ಘಟಕದಲ್ಲಿ ಬೆಂಕಿ ಅವಘಡ: ಮೂವರು ಸಾವು

Published : Sep 03, 2019, 10:50 AM IST
ONGC ಘಟಕದಲ್ಲಿ ಬೆಂಕಿ ಅವಘಡ: ಮೂವರು ಸಾವು

ಸಾರಾಂಶ

ಮುಂಬೈನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ಬೆಳಗ್ಗಿನ ಹೊತ್ತು ಅವಘಡ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ನವದೆಹಲಿ(ಸೆ.03): ಮುಂಬೈನ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ಬೆಳಗ್ಗಿನ ಹೊತ್ತು ಅವಘಡ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮುಂಬೈ ಸಮೀಪದ ಉರನ್‌ನಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ಯಲ್ಲಿ ಅವಘಡ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಈ ಬಗ್ಗೆ ONGC ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದೆ.

ಸತತ ಎರಡು ಗಂಟೆಗಳ ಕಾರ್ಯಾಚರಣೆ ನಂತರ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆರಂಭದಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ ಪ್ಲಾಂಟ್‌ನ ಚರಂಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತೖಲ ನಿಗಮದ ಕಾರ್ಯಾಚರಣೆ ನಡೆಯುವ ಭಾಗದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಅನಿಲವನ್ನು ಗುಜರಾತ್‌ನ ಹಾಝಿರಾ ಪ್ಲಾಂಟ್‌ಗೆ ವರ್ಗಾಯಿಸಲಾಗಿದೆ. ಒಎನ್‌ಜಿಸಿ ಭಾರತದ ತ್ಯಂತ ದೊಡ್ಡ ಕಚ್ಚಾ ತೈಲ ಹಾಗೂ ಅನಿಲ ಸಂಸ್ಕರಣ ಘಟಕವಾಗಿದೆ.

ಸರ್ಕಾರಿ ಕಟ್ಟಡದಲ್ಲಿ ಅಗ್ನಿ ದುರಂತ: ಮಹತ್ವದ ದಾಖಲೆಗಳು ಭಸ್ಮ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಾಗೃತ ಜನರೇ ಆಯುರ್ವೇದ ಪಸರಿಸಲಿ : ರಾಘವೇಶ್ವರ ಶ್ರೀ
ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹ 50 ಸಾವಿರ!