ಬಿಜೆಪಿಗೆ ಜಿಗಿದ ಮೂವರಿಗೆ ಸಿಗುತ್ತಿದೆ ಸಚಿವ ಸ್ಥಾನ

Published : Jul 13, 2019, 02:11 PM ISTUpdated : Jul 13, 2019, 03:51 PM IST
ಬಿಜೆಪಿಗೆ ಜಿಗಿದ ಮೂವರಿಗೆ ಸಿಗುತ್ತಿದೆ ಸಚಿವ ಸ್ಥಾನ

ಸಾರಾಂಶ

ಬಿಜೆಪಿಗೆ ಪಲಾಯನ ಮಾಡಿದ್ದ ಮೂವರು ಕಾಂಗ್ರೆಸಿಗರಿಗೆ ಇದೀಗ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದೆ. 

ಪಣಜಿ [ಜು.13] :  ಕಾಂಗ್ರೆಸ್ಸಿನ 10 ಶಾಸಕರು ಬಿಜೆಪಿಗೆ ಜಿಗಿದ ಬೆನ್ನಲ್ಲೇ, ಅವರಿಗೆ ಸಚಿವ ಹುದ್ದೆ ನೀಡಲು ಇಲ್ಲಿನ ಸರ್ಕಾರ ಸಜ್ಜಾಗಿದೆ. 

ಸರ್ಕಾರವನ್ನೇ ಅಸ್ಥಿರಗೊಳಿಸುವ ಬೆದರಿಕೆಯೊಡ್ಡುತ್ತಿದ್ದ ಓರ್ವ ಸ್ವತಂತ್ರ ಶಾಸಕ ಹಾಗೂ ಗೋವಾ ಫಾರ್ವರ್ಡ್‌ ಮೂವರು ಸಚಿವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಸೂಚಿಸಿದ್ದು, ಇವರ ಸ್ಥಾನವನ್ನು ಪಕ್ಷಾಂತರ ಮಾಡಿದ ಮೂವರಿಗೆ ನೀಡಲಾಗುತ್ತಿದೆ. 

ಡಿಸಿಎಂ ಸೇರಿ ನಾಲ್ವರಿಗೆ ರಾಜೀನಾಮೆ ನೀಡಲು ಗೋವಾ ಸಿಎಂ ಸೂಚನೆ

ಗೋವಾ ವಿಧಾನಸಭೆಯಲ್ಲಿ ವಿಪಕ್ಷ ನಾಯಕರಾಗಿದ್ದ ಚಂದ್ರಕಾಂತ್‌ ಕವ್ಲೇಕರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತಿದೆ. 

ಜೆನಿಫರ್ ಮಾನ್ಸರೆಟ್ಟೊ ಹಾಗೂ, ಫಿಲಿಪ್ ನೆರಿ ರೋಡ್ರಿಗಸ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ. ಸಚಿವ ಸಂಪುಟ ವಿಸ್ತರಣೆ ವೇಳೆ ಮೂವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ
ಫೇಸ್‌ಬುಕ್ ಚಿಟ್ಟೆಯ ಮುಖ ನೋಡಿ ಹನಿಹೀರಲು ಬಂದವನೇ ಟ್ರ್ಯಾಪ್ , ಯುವಕನ ಮೇಲೆ ಹಲ್ಲೆ, ಹಣಕ್ಕೆ ಬೇಡಿಕೆ ಇಟ್ಟವರು ಎಸ್ಕೇಪ್!