
ಹುಣಸೂರು : ಕಳೆದ ಬಾರಿ ಸಾಕಷ್ಟುವಿವಾದಗಳಿಗೆ ಕಾರಣವಾಗಿದ್ದ, ಹುಣಸೂರಿನ ಹನುಮ ಜಯಂತಿ ಈ ಬಾರಿ ಶಾಂತಿಯುತವಾಗಿ ಅತ್ಯಂತ ವಿಜೃಂಭಣೆಯಿಂದ ಶನಿವಾರ ನೆರವೇರಿತು.
ಸಂಸದ ಪ್ರತಾಪ್ ಸಿಂಹ ಮುಂದಾಳತ್ವದಲ್ಲಿ ನಡೆದ ಜಯಂತಿಯಲ್ಲಿ 25 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಜೆಡಿಎಸ್ನ ಹಾಲಿ ಶಾಸಕ ಎಚ್. ವಿಶ್ವನಾಥ್, ಕಾಂಗ್ರೆಸ್ಸಿನ ಮಾಜಿ ಶಾಸಕ ಮಂಜುನಾಥ್ ಅವರೂ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಸ್ಥಳೀಯ ಕೆಲ ಮುಸ್ಲಿಂ ಮುಖಂಡರು ಸಹ ಮೆರವಣಿಗೆಯಲ್ಲಿ ಪಾಲ್ಗೊಂಡು ಸೌಹಾರ್ದತೆ ಮೆರೆದರು.
ಬೆಳಿಗ್ಗೆ 11.30ಕ್ಕೆ ಆರಂಭವಾದ ಮೆರವಣಿಗೆಯು ನಿಧಾನಗತಿಯಲ್ಲಿ ಸಾಗಿ ಮಂಜುನಾಥಸ್ವಾಮಿ ದೇವಾಲಯಕ್ಕೆ ಸಂಜೆ 5.30ರ ವೇಳೆಗೆ ಆಗಮಿಸಿತು. ಸುಮಾರು 6 ಕಿಮೀ ದೂರವನ್ನು ಕ್ರಮಿಸಲು ಆರೂವರೆ ಗಂಟೆಗಳ ಕಾಲ ಹಿಡಿಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಬಹುತೇಕರು ಕೇಸರಿ ವರ್ಣದ ಟೀಶರ್ಟ್ ಧರಿಸಿ, ಹಣೆಗೆ ತಿಲಕವಿಟ್ಟಿದ್ದರು, ಕೈಯಲ್ಲಿ ಕೇಸರಿ ಧ್ವಜವನ್ನು ಹಿಡಿದು ಜೈಕಾರ ಕೂಗುತ್ತಿದ್ದರು. ಇಡೀ ವಾತಾವರಣ ಕೇಸರಿಮಯವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.