ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ

Published : Jun 22, 2017, 02:09 PM ISTUpdated : Apr 11, 2018, 12:44 PM IST
ಕಾರವಾರ ನೌಕಾನೆಲೆಯೊಳಗೆ 3 ಶಂಕಿತರ ಪ್ರವೇಶ; ಉಗ್ರ ದಾಳಿ ಭೀತಿ

ಸಾರಾಂಶ

ವಾಯುನೆಲೆ ನಿರ್ಮಾಣದ ಸೀಬರ್ಡ್ ಯೋಜನೆಯ ಭಾಗವಾಗಿ ಐಆರ್'ಬಿ ಕಂಪನಿಯು ಚತುಷ್ಪತ ರಸ್ತೆ ಕಾಮಗಾರಿ ಕಾರ್ಯ ನಡೆಸುತ್ತಿದೆ. ಕಾಮಗಾರಿ ಸ್ಥಳದಿಂದ ಗೋಡೆ ಹೊಡೆದು ಮೂವರು ಅಪರಿಚಿತರು ನುಸುಳಿರುವ ಸಂಭವವಿದೆ ಎನ್ನಲಾಗಿದೆ.

ಬೆಂಗಳೂರು(ಜೂನ್ 22): ಕಾರವಾರದ ನೌಕಾನೆಲೆಯೊಳಗೆ ಮೂವರು ಶಂಕಿತರು ನುಸುಳಿರುವ ಮಾಹಿತಿ ಸುವರ್ಣನ್ಯೂಸ್'ಗೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಐಎನ್'ಎಸ್ ಕದಂಬಾ ನೌಕಾ ನೆಲೆಯ ಸುತ್ತಮುತ್ತ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ನಾಕಾಬಂದಿ ಹಾಕಲಾಗಿದೆ. ಐಎನ್ಎಸ್ ಕದಂಬದ ಮೇಲೆ ದಾಳಿ ನಡೆಸಲು ಈ ವ್ಯಕ್ತಿಗಳು ಪ್ರವೇಶಿಸಿರಬಹುದೆಂಬ ಶಂಕೆ ಇದೆ. ವಾಯುನೆಲೆಗೆ ಉತ್ತರಕನ್ನಡ ಎಸ್'ಪಿ ವಿನಾಯಕ್ ಪಾಟೀಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಾಯುನೆಲೆ ನಿರ್ಮಾಣದ ಸೀಬರ್ಡ್ ಯೋಜನೆಯ ಭಾಗವಾಗಿ ಐಆರ್'ಬಿ ಕಂಪನಿಯು ಚತುಷ್ಪತ ರಸ್ತೆ ಕಾಮಗಾರಿ ಕಾರ್ಯ ನಡೆಸುತ್ತಿದೆ. ಕಾಮಗಾರಿ ಸ್ಥಳದಿಂದ ಗೋಡೆ ಹೊಡೆದು ಮೂವರು ಅಪರಿಚಿತರು ನುಸುಳಿರುವ ಸಂಭವವಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು