
ಉತ್ತರಕನ್ನಡ, [ಮಾ.09]: ಪ್ರವಾಸಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ಬುರುಡೆ ಫಾಲ್ಸ್ ನಲ್ಲಿ ನಡೆದಿದೆ.
ಜಿಲ್ಲೆಯ ಸಿದ್ದಾಪುರ ಮೂಲದ ಇಬ್ಬರು, ಶಿರಸಿಯ ಒಬ್ಬ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪಿದ್ದವರು. ಶಿರಸಿ ಮೂಲದ ಮುರಳಿ, ಸಿದ್ದಾಪುರದ ಅಭಿಷೇಕ್ ನಾಯ್ಕ್ ಹಾಗೂ ಸಾಯಿ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
ಸಾಯಿ ಸಿದ್ದಾಪುರ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ. ಈ ಬಗ್ಗೆ ಸಿದ್ದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.