
ಚಿಕ್ಕೋಡಿ: ವಿವಿಧ ಜಾತಿಯ ಸುಮಾರು 30ಕ್ಕೂ ಹೆಚ್ಚು ವಿಷಕಾರಿ ಹಾವುಗಳು ಕೊಳವೆಬಾವಿ ಪಂಪ್ಸೆಟ್ನ ಪೈಪುಗಳಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಭೀಮು ಸಂಗಮೆ ಎಂಬ ರೈತನ ಹೊಲದಲ್ಲಿ ಈ ಹಾವುಗಳು ಸಾಮೂಹಿಕವಾಗಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ರೈತ ಭೀಮು ಅವರ ಜಮೀನು ಕೃಷ್ಣಾ ನದಿಗೆ ಹೊಂದಿಕೊಂಡಿದೆ. ಮಳೆಗಾಲದಿಂದಾಗಿ ಕೃಷ್ಣಾ ನದಿಗೆ ಜೀವಕಳೆ ಬಂದಿದ್ದರಿಂದ ಕಳೆದ ಒಂದು ತಿಂಗಳಿಂದ ಪಂಪ್ಸೆಟ್ ಬಂದ್ ಆಗಿತ್ತು. ಆದರೆ, ಇತ್ತೀಚೆಗೆ ನದಿಯಲ್ಲಿನ ನೀರಿನ ಪ್ರಮಾಣ ಕಡಿಮೆಯಾಗಿತ್ತು.
ಹೀಗಾಗಿ ಇತ್ತೀಚೆಗೆ ಪಂಪ್ಸೆಟ್ ಮೂಲಕ ಬೆಳೆಗಳಿಗೆ ನೀರು ಹಾಯಿಸಲು ರೈತ ಅದನ್ನು ಚಾಲು ಮಾಡಿದ್ದಾನೆ. ನಂತರ ಜಮೀನು ಕಡೆ ಹೋದಾಗ ಪೈಪ್ನಲ್ಲಿ ಸಿಲುಕಿಕೊಂಡಿರುವ ಮೃತ ಹಾವುಗಳ ಅವಶೇಷಗಳು ಹೊರಬಿದ್ದಿವೆ. ಇದರಿಂದ ಗಾಬರಿಗೊಂಡ ರೈತ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಕೂಡಲೇ ಅಂಕಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಹಾವುಗಳ ಅವಶೇಷಗಳನ್ನು ಪರಿಶೀಲಿಸಿದರು. ಬಹುತೇಕ ಹಾವುಗಳು ಕೊಳವೆ ಬಾವಿಯೊಳಗಡೆಯಿಂದ ಹೊರಬರಲಾಗದೆ, ಉಸಿರುಗಟ್ಟಿಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.