
ಶ್ರೀನಗರ(ಎ.25): ಕಾಶ್ಮೀರದಲ್ಲಿ ಕಲ್ಲೆಸೆತಗಾರರನ್ನು ಸಂಘಟಿಸುವುದಕ್ಕಾಗಿ ಕಾರ್ಯಾಚರಿಸುತ್ತಿದ್ದ ಸುಮಾರು 300 ವಾಟ್ಸಪ್ ಗುಂಪುಗಳಲ್ಲಿ, ಶೇ. 90ರಷ್ಟುಗುಂಪುಗಳನ್ನು ಮುಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಎನ್ಕೌಂಟರ್ ತಾಣಗಳಲ್ಲಿ ಭದ್ರತಾ ಪಡೆಗಳ ಕಾರ್ಯಾಚರ ಣೆಗಳನ್ನು ವಿಫಲಗೊಳಿಸುವ ನಿಟ್ಟಿನಲ್ಲಿ ಕಲ್ಲೆಸೆತಗಾ ರರನ್ನು ವಾಟ್ಸಪ್ ಗುಂಪುಗಳ ಮೂಲಕ ಸಂಘಟಿಸ ಲಾಗುತಿತ್ತು. ಇಂಥ ಗುಂಪುಗಳು ಮತ್ತು ಅವುಗಳ ಅಡ್ಮಿನಿಸ್ಪ್ರೇಟರ್ಗಳನ್ನು ಗುರುತಿಸಿ ಕರೆಸಿಕೊಂಡ ಪೊಲೀಸರು ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಈ ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಅವುಗಳಲ್ಲಿ ಕಳೆದ 3 ವಾರಗಳಲ್ಲಿ ಶೇ.90ರಷ್ಟುಗುಂಪುಗಳನ್ನು ಮುಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.