
ವಾರಣಾಸಿ(ಮಾ.21): ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಅವಹೇಳನಕಾರಿ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪಸರಿಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ವಾರಣಾಸಿ, ಗಾಜಿಯಾಪುರ, ಘಾಜಿಪುರ್,ಸೋನ್'ಭದ್ರ ಹಾಗೂ ಬರೇಲಿ ಜಿಲ್ಲೆಯವರಾಗಿದ್ದು, ಪೋಸ್ಟ್ ಮಾಡಿದ 24 ಗಂಟೆಗಳಲ್ಲಿಯೇ ಬಂಧಿಸಲಾಗಿದೆ. ಅವಹೇಳಕಾರಿ ಚಿತ್ರಗಳನ್ನು ಪ್ರಕಟಿಸಿರುವ ಬಗ್ಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವಿದ್ಯಾರ್ಥಿ ದಳ ದೂರನ್ನು ದಾಖಲಿಸಿತ್ತು. ಬಂಧಿತ ನಾಲ್ವರು ಅವಹೇಳನಕಾರಿ ಚಿತ್ರಗಳನ್ನು ವ್ಯಾಟ್ಸ್'ಪ್' ಹಾಗೂ ಫೇಸ್'ಬುಕ್'ನಲ್ಲಿ ಪೋಸ್ಟ್ ಮಾಡಿ ಎಲ್ಲ ಕಡೆ ಶೇರ್ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.