
ಬೆಂಗಳೂರು(ಜ.15): ನಗರದಲ್ಲಿ ಸರಗಳ್ಳರ ಕೈಚಳಕ ಮಿತಿ ಮೀರಿದ್ದು, ಇಂದು ಮುಂಜಾನೆ ಪೊಲೀಸ್ ಇನ್ಸ್'ಪೆಕ್ಟರ್ ಪತ್ನಿಯ ಮಾಂಗಲ್ಯ ಸರವನ್ನೇ ಕಿತ್ತುಕೊಂಡು ಹೋಗಿದ್ದಾರೆ. ಮನೆ ಮುಂದೆ ನೀರುಹಾಕುತ್ತಿದ್ದ ಗಂಗಮ್ಮ ಎಂಬುವವರ ಮಾಂಗಲ್ಯ ಸರವನ್ನು ಖದೀಮರು ಎಗರಿಸಿದ್ದಾರೆ.
ನಿನ್ನೆ ರಾತ್ರಿಯಿಂದ ಮೂರು ಕಡೆ ಸರಗಳ್ಳರು ಕೈಚಳಕ ತೋರಿದ್ದು, ಇಂದು ಬೆಳಗ್ಗೆ ಡಿಜಿ ಕಚೇರಿಯಲ್ಲಿ ಇನ್ಸ್'ಪೆಕ್ಟರ್ ಆಗಿರುವ ಕೆಂಚೇಗೌಡ ಪತ್ನಿ ಗಂಗಮ್ಮ ಎಂಬುವವರ ಸರ ಕಿತ್ತುಕೊಂಡು ಹೋಗಿದ್ದಾರೆ. ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆಘಾತ ಮೂಡಿಸುವಂತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.