ಲಾರಿ - ಕ್ಯಾಂಟರ್‌ ಡಿಕ್ಕಿಯಾಗಿ ಭೀಕರ ಅಪಘಾತ : ನಾಲ್ವರ ಸಾವು

Published : Mar 29, 2019, 07:51 AM IST
ಲಾರಿ - ಕ್ಯಾಂಟರ್‌ ಡಿಕ್ಕಿಯಾಗಿ ಭೀಕರ ಅಪಘಾತ : ನಾಲ್ವರ ಸಾವು

ಸಾರಾಂಶ

ಲಾರಿ ಹಾಗೂ ಕ್ಯಾಂಟರ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. 

ಆನೇಕಲ್‌ :  ಲಾರಿ ಹಾಗೂ ಕ್ಯಾಂಟರ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ ತಾಲೂಕಿನ ಸೂರ್ಯಾಸಿಟಿ ಠಾಣಾ ವ್ಯಾಪ್ತಿಯ ತಿರುಮಗೊಂಡನಹಳ್ಳಿ (ರಾಷ್ಟ್ರೀಯ ಹೆದ್ದಾರಿ-7) ಬಳಿ ನಡೆದಿದೆ.

ಮೃತಪಟ್ಟವರನ್ನು ಬಿಹಾರ ಮೂಲದ ಪಿಂಟು(21), ರತನ್‌ (22), ಪರಮೇಶ್‌ (24), ವಿನೋದ್‌(24) ಎಂದು ಗುರುತಿಸಲಾಗಿದೆ. ಎಲ್ಲರೂ ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇನ್ನು ಕ್ಯಾಂಟರ್‌ನ ಮೇಲ್ಭಾಗದಲ್ಲಿ ಕುಳಿತ್ತಿದ್ದ ಹಾಗೂ ಲಾರಿಯಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಅದರಲ್ಲಿ ಶಿವು ಎಂಬುವವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಮುಂಜಾನೆ 5.30ರ ಸುಮಾರಿನಲ್ಲಿ ಅಪಘಾತ ನಡೆದಿದೆ. ಇಟ್ಟಿಗೆಯನ್ನು ಗ್ರಾಹಕರೊಬ್ಬರಿಗೆ ಪೂರೈಸಲು ಕ್ಯಾಂಟರ್‌ ತೆರಳುತ್ತಿತ್ತು. ಈ ಕ್ಯಾಂಟರ್‌ ಅತ್ತಿಬೆಲೆ ಕಡೆಯಿಂದ ಬಂದು ತಿರುಮಗೊಂಡನಹಳ್ಳಿ ಬಳಿ ಹೆದ್ದಾರಿಯಲ್ಲಿ ಚಾಲಕ ವೇಗವಾಗಿ ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಸರಕು ಸಾಗಣೆ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕ್ಯಾಂಟರ್‌ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಕ್ಯಾಂಟರ್‌- ಲಾರಿ ನಡುವಿನ ಅಪಘಾತದಿಂದ ಹೆದ್ದಾರಿ 7ರಲ್ಲಿ ಸಂಚಾರ ದಟ್ಟಣೆ ಏರ್ಪಟ್ಟಿತ್ತು. ಸೂರ‍್ಯನಗರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಲಾರಿ ಮತ್ತು ಕ್ಯಾಂಟರ್‌ ಅನ್ನು ಜೆಸಿಬಿ ಸಹಾಯದಿಂದ ಬೇರ್ಪಡಿಸಿ ತೆರವುಗೊಳಿಸಿದರು. ಬಳಿಕ ಸಂಚಾರ ವ್ಯವಸ್ಥೆ ಸುಗಮವಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ