
ಇಂಫಾಲ್(ಡಿ.15): ಮಣಿಪುರದ ಚಾಂಡೇಲ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಉಗ್ರ ದಾಳಿಗಳಲ್ಲಿ ನಾಲ್ವರು ಪೊಲೀಸರು ಅಸುನೀಗಿದ್ದಾರೆ.
ಗಡಿ ಪಟ್ಟಣವಾಗಿರುವ ಮೋರಾ ಎಂಬ ಪಟ್ಟಣದಿಂದ 21 ಕಿಮೀ ದೂರದ ಲೋಕ್ಚಾವೋ ಎಂಬಲ್ಲಿ ಮುಖ್ಯಮಂತ್ರಿ ಒಕ್ರಂ ಇಬೊಬಿ ಸಿಂಗ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿದ್ಧತೆಯಲ್ಲಿ ತೊಡಗಿದ್ದ ಪೊಲೀಸರ ಮೇಲೆ ದಾಳಿ ನಡೆಸಲಾಗಿದೆ. ಈ ಘಟನೆಯಲ್ಲಿ ಮೂವರು ಅಸುನೀಗಿದ್ದಾರೆ.
ಹೊಸತಾಗಿ ರಚನೆಯಾಗಿರುವ ತೆಂಗೋನುಪಾಲ್ ಜಿಲ್ಲೆಯ ಉದ್ಘಾಟನೆಗಾಗಿ ಸಿಎಂ ಆಗಮಿಸಬೇಕಾಗಿತ್ತು. ಅದೇ ಜಿಲ್ಲೆಯ ಬಾಂಗ್'ಯಾಂಗ್ ಎಂಬಲ್ಲಿ ಪೊಲೀಸರ ಮೇಲೆ ನಡೆದ ದಾಳಿಯಲ್ಲಿ ಒಬ್ಬ ಸಿಬ್ಬಂದಿ ಸಾವನ್ನಪ್ಪಿ, ಮತ್ತೊಬ್ಬ ಪೊಲೀಸ್ ಸಿಬ್ಬಂದಿಗೆ ಗಂಭೀರವಾಗಿ ಗಾಯಗಳಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.