ಭಾರೀ ಬಿರುಗಳಿ, ಸಿಡಿಲಿನ ಅಬ್ಬರ: 40 ಜನರ ಸಾವು..!

Published : May 29, 2018, 01:19 PM IST
ಭಾರೀ ಬಿರುಗಳಿ, ಸಿಡಿಲಿನ ಅಬ್ಬರ: 40 ಜನರ ಸಾವು..!

ಸಾರಾಂಶ

ಉತ್ತರ ಭಾರತದ ಮೂರು ರಾಜ್ಯಗಳಲ್ಲಿ ಭಾರೀ ಬಿರುಗಾಳಿ ಮತ್ತು ಸಿಡಿಲು ಜನರ ಜೀವನವನ್ನು ಅಸ್ತವ್ಯಸ್ತ ಮಾಡಿದೆ. ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ ಬಿರುಗಾಳಿ, ಸಿಡಿಲಿಗೆ ಒಟ್ಟಾರೆ 40 ಜನರು ಬಲಿಯಾಗಿದ್ದಾರೆ.

ನವದೆಹಲಿ[ಮೇ 29]: ಉತ್ತರ ಭಾರತದ ಮೂರು ರಾಜ್ಯಗಳಲ್ಲಿ ಭಾರೀ ಬಿರುಗಾಳಿ ಮತ್ತು ಸಿಡಿಲು ಜನರ ಜೀವನವನ್ನು ಅಸ್ತವ್ಯಸ್ತ ಮಾಡಿದೆ. ಉತ್ತರ ಪ್ರದೇಶ, ಜಾರ್ಖಂಡ್, ಬಿಹಾರದಲ್ಲಿ ಬಿರುಗಾಳಿ, ಸಿಡಿಲಿಗೆ ಒಟ್ಟಾರೆ 40 ಜನರು ಬಲಿಯಾಗಿದ್ದಾರೆ.  

ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ 5 ಜನ ಮರಣ ಹೊಂದಿ,  4 ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಆಶ್ವಥಿ ಹೇಳಿದ್ದಾರೆ. ಖಾನ್ ಪುರದಲ್ಲಿ ಒಬ್ಬರು ಹಾಗೂ ರಾಯ್ ಬರೇಲಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಬಗ್ಗೆಯೂ ವರದಿಗಳು ಪ್ರಕಟವಾಗಿದೆ. 

ಇನ್ನು ಬಿಹಾರ ಮತ್ತು ಜಾಖರ್ಖಂಡ್ ನಲ್ಲೂ ಬಿರುಗಾಳಿಯ ಅಬ್ಬರ ಜೋರಾಗಿದ್ದು, ಬಿಹಾರ ರಾಜ್ಯವೊಂದರಲ್ಲೇ ಸುಮಾರು 19 ಜನರು ಅಸುನೀಗಿದ್ದಾರೆ. ಜಾರ್ಖಂಡ್ ನಲ್ಲಿ 12 ಜನ ಮೃತಪಟ್ಟು 28 ಜನ ಗಾಯಗೊಂಡಿದ್ದಾರೆ. 

ಸಿಡಿಲು ಮತ್ತು ಬಿರುಗಾಳಿ ಎದುರಾಗಿರುವ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌