ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 40 ಕೆಜಿ ಚಿನ್ನ ದರೋಡೆ...!

Published : Dec 28, 2016, 12:35 PM ISTUpdated : Apr 11, 2018, 12:35 PM IST
ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 40 ಕೆಜಿ ಚಿನ್ನ ದರೋಡೆ...!

ಸಾರಾಂಶ

ಪ್ರಾಥಮಿಕ ತನಿಖೆ ಪ್ರಕಾರ ಸುಮಾರು 40 ಕೆಜಿ ತೂಕದ ಚಿನ್ನ ಕಳ್ಳತನವಾಗಿದ್ದು, ಶಾಖೆಯ ಸಿಬ್ಬಂದಿಯಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದಿದ್ದಾರೆ ಪೊಲೀಸರು.

ಹೈದರಾಬಾದ್(ಡಿ.28): ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ ಮುತ್ತೂಟ್ ಫೈನಾನ್ಸ್ ಕಂಪನಿ ಮೇಲೆ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ ನಾಲ್ವರು ಖದೀಮರ ಗುಂಪು 40 ಕೆಜಿ ತೂಕದ ಚಿನ್ನವನ್ನು ದರೋಡೆ ಮಾಡಿದೆ.

ತೆಲಂಗಾಣ ರಾಜಧಾನಿ ಹೈದರಾಬಾದ್‌'ನ ಹೊರ ವಲಯದ ಆರ್‌'ಸಿಪುರದಲ್ಲಿರುವ ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಶಾಖೆಗೆ ಇಂದು ಬೆಳಗ್ಗೆ 9.30ಕ್ಕೆ ಕೆಂಪು ಬಣ್ಣದ ಸ್ಕಾರ್ಪಿಯೊ ಕಾರಿನಲ್ಲಿ ಬಂದ ನಾಲ್ವರು ಆಗುಂತಕರು ತಾವು ಸಿಬಿಐ ಅಧಿಕಾರಿಗಳಾಗಿದ್ದು, ಹಣ ವಿನಿಮಯ ಸಂಬಂಧ ತಪಾಸಣೆ ನಡೆಸಲು ಆಗಮಿಸಿರುವುದಾಗಿ ಹೇಳಿದ್ದಾರೆ. ಇದನ್ನು ನಂಬಿದ ಸಂಸ್ಥೆ ಸಿಬ್ಬಂದಿ, ನಾಲ್ವರನ್ನು ಕಚೇರಿ ಒಳಗೆ ಬಿಟ್ಟುಕೊಂಡಿದ್ದಾರೆ.

ಈ ವೇಳೆ ಸಿಬ್ಬಂದಿಗೆ ಗನ್‌'ನಿಂದ ಶೂಟ್ ಮಾಡುವುದಾಗಿ ಹೆದರಿಸಿ ಚಿನ್ನ ಮತ್ತು ಶಾಖೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಉಪಕರಣಗಳನ್ನು ಖದೀಮರು ಕದ್ದೊಯ್ದಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ವಿಶ್ವ ಪ್ರಸಾದ್ ಹೇಳಿದ್ದಾರೆ. ಅದರ ಪ್ರಾಥಮಿಕ ತನಿಖೆ ಪ್ರಕಾರ ಸುಮಾರು 40 ಕೆಜಿ ತೂಕದ ಚಿನ್ನ ಕಳ್ಳತನವಾಗಿದ್ದು, ಶಾಖೆಯ ಸಿಬ್ಬಂದಿಯಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದಿದ್ದಾರೆ ಪೊಲೀಸರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುತ್ತೂಟ್ ಸಿಬ್ಬಂದಿ, ‘‘ಗುಂಪಿನಲ್ಲಿ ಐವರು ಸದಸ್ಯರಿದ್ದು, ಓರ್ವ ಸಂಚಾರಿ ಪೊಲೀಸರಂತೆ ದಿರಿಸು, ಇತರರು ಮಂಕಿ ಟೋಪಿ ಧರಿಸಿದ್ದರು. ಸಿಬಿಐ ಅಧಿಕಾರಿಗಳೆಂದು ಹೇಳಿದ ದುಷ್ಕರ್ಮಿಗಳು, ಶಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ ಈ ಬಗ್ಗೆ ತನಿಖೆ ನಡೆಸಲು ಆಗಮಿಸಿರುವುದಾಗಿ ಹೇಳಿದರು. ಅವರನ್ನು ತಡೆಯಲು ಮುಂದಾದ ಭದ್ರತಾ ಸಿಬ್ಬಂದಿಗೆ ಗುರಿಯಾಗಿಸಿ ಗನ್ ತೋರಿಸಿ ಮೂಲೆಯಲ್ಲಿ ಕೂಡಿ ಹಾಕಿ ಚೀಲ ಮತ್ತು ಬೆಡ್‌'ಶೀಟ್‌'ನಲ್ಲಿ ಚಿನ್ನವನ್ನು ಕದ್ದೊಯ್ದಿದ್ದಾರೆ,’’ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka By-Election Results 2026 LIVE: ಇಂದು ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ; ಕಾಂಗ್ರೆಸ್-ಬಿಜೆಪಿ ನಡುವೆ ಬಿಗ್ ಫೈಟ್
5 States Assembly Election Results 2026: ಇಂದು 5 ರಾಜ್ಯಗಳ ವಿಧಾನಸಭಾ ಫಲಿತಾಂಶ: ಪಂಚ ಗದ್ದುಗೆ ಯಾರಿಗೆ?