ಗ್ರಾಹಕರೇ ಎಚ್ಚರ. ಈ ಎರಡು ದಿನಗಳ ಕಾಲ ರಾಜಧಾನಿಯಲ್ಲಿ ಪೆಟ್ರೋಲ್ ಡೀಸೆಲ್ ಸಿಗೋದಿಲ್ಲ.
ನವದೆಹಲಿ : ದಿನದಿನಕ್ಕೆ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿದ್ದು ಜನರಿಗೆ ತಲೆ ನೋವಾಗಿದೆ. ಇದೇ ವೇಳೆ ರಾಷ್ಟ್ರ ರಾಜಧಾನಿಯಲ್ಲಿ ಅಕ್ಟೋಬರ್ 22 ರಂದು 400 ಪೆಟ್ರೋಲ್ ಬಂಕ್ ಗಳನ್ನು ಮುಚ್ಚಲಾಗುತ್ತಿದೆ.
ದಿಲ್ಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ತೆಗೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು ಈ ನಿಟ್ಟಿನಲ್ಲಿ400 ಪೆಟ್ರೋಲ್ ಬಂಕ್ ಗಳನ್ನು ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತಿದೆ.
ಇದರಲ್ಲಿ ಸಿಎನ್ ಜಿ ಪಂಪ್ ಗಳೂ ಕೂಡ ಸೇರಿದ್ದು, ಮುಂಜಾನೆ 6 ಗಂಟೆಯಿಂದ ಮರುದಿನ ಅಂದರೆ ಅಕ್ಟೋಬರ್ 23ರ ಸಂಜೆ 5 ಗಂಟೆವರೆಗೆ ಮುಚ್ಚಲಿವೆ ಎಂದು ಪೆಟ್ರೋಲ್ ಬಂಕ್ ಅಸೋಸಿಯೇಷನ್ ತಿಳಿಸಿದೆ.
ಕೇಂದ್ರ ಸರ್ಕಾರ ಅಕ್ಟೋಬರ್ 4 ರಂದು ತೈಲ ಬೆಲೆಯಲ್ಲಿ ಇಳಿಕೆ ಮಾಡಲಾಗಿತ್ತು. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2.5 ರು. ಇಳಿಕೆ ಮಾಡಲಾಗಿತ್ತು. ಆದರೂ ಕೂಡ ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ದಿನ ದಿನವೂ ಕೂಡ ಏರಿಕೆಯಾಗುತ್ತಿದೆ.