
ಲಕ್ನೋ (ಫೆ.23): ರಾಷ್ಟ್ರ ರಾಜಕಾರಣದ ದಿಕ್ಕನ್ನೇ ಬದಲಿಸುವ ಶಕ್ತಿ ಹೊಂದಿರುವ ಉತ್ತರ ಪ್ರದೇಶ ವಿಧಾನಸಭೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ.
12 ಜಿಲ್ಲೆಗಳ 53 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರ ಮತದಾನಕ್ಕಾಗಿ ಆಯೋಗವು ಸಕಲ ರೀತಿಯಲ್ಲಿ ವ್ಯವಸ್ಥೆ ಮಾಡಿದೆ.
680 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಪ್ರತಿನಿಧಿಸುತ್ತಿರುವ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲೂ ಮತದಾನ ನಡೆಯಲಿದ್ದು, ಪಕ್ಷಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
2012ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷವು 53 ಕ್ಷೇತ್ರಗಳಲ್ಲಿ 24 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಬಹುಜನ ಸಮಾಜ ಪಕ್ಷ 15, ಕಾಂಗ್ರೆಸ್ 6 ಮತ್ತು ಬಿಜೆಪಿ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.
ನಾಲ್ಕನೆ ಹಂತ ಚುನಾವಣೆಯಲ್ಲಿ 189 ಕೋಟ್ಯಧಿಪತಿಗಳು ಮತ್ತು 116 ಕ್ರಿಮಿನಲ್ ಹಿನ್ನೆಲೆ ಇರುವ ಅಭ್ಯರ್ಥಿಗಳು ಸಹ ಕಣದಲ್ಲಿದ್ದಾರೆ. ದೇಶದ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮುಂದಿನ ಮೂರು ಹಂತಗಳಿಗೆ ಫೆ. 27 ಹಾಗೂ ಮಾ.4 ಮತ್ತು 8ರಂದು ಮತದಾನ ನಡೆಯಲಿದೆ. ಮಾ.11ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
(ಚಿತ್ರ ಕೃಪೆ: ಶಾರಿಕ್ ನೂರ್, ಆಲ್ ಇಂಡಿಯಾ ರೇಡಿಯೋ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.