ಚುನಾವಣೆ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಭದ್ರತಾ ಪಡೆಗಳ ಮೇಲೆ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕೋಬ್ರಾ ಪಡೆಯ 5 ಯೋಧರಿಗೆ ಗಾಯಗಳಾಗಿವೆ. ಈ ವೇಳೆ ಯೋಧರೂ ಪ್ರತಿದಾಳಿ ನಡೆಸಿದಾಗ 5 ನಕ್ಸಲರನ್ನು ಹೊಡೆದುರುಳಿಸಿದ್ದಾರೆ.
ರಾಯ್ಪುರ(ನ.13): ಮೊದಲ ಹಂತದ ಚುನಾವಣೆ ನಡೆಯುವಾಗಲೇ ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಎರಡು ಕಡೆ ಸೋಮವಾರ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಚುನಾವಣೆ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಭದ್ರತಾ ಪಡೆಗಳ ಮೇಲೆ ನಕ್ಸಲರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕೋಬ್ರಾ ಪಡೆಯ 5 ಯೋಧರಿಗೆ ಗಾಯಗಳಾಗಿವೆ. ಈ ವೇಳೆ ಯೋಧರೂ ಪ್ರತಿದಾಳಿ ನಡೆಸಿದಾಗ 5 ನಕ್ಸಲರನ್ನು ಹೊಡೆದುರುಳಿಸಿದ್ದಾರೆ.
ಈ ಗುಂಡಿನ ಚಕಮಕಿ ವೇಳೆ ಓರ್ವ ಪೊಲೀಸ್ ಸಬ್’ಇನ್ಸ್’ಪೆಕ್ಟರ್ ಸೇರಿದಂತೆ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಫತ್ರೆಗೆ ದಾಖಲಿಸಲಾಗಿದೆ.