ಬೆಂಗಳೂರು(ಅ.6): ಬೆಳ್ಳಂದೂರಿನ ಕಟ್ಟಡ ಕುಸಿತದಲ್ಲಿ ಸಾವನಪ್ಪಿದವರ ಸಂಖ್ಯೆ 5ಕ್ಕೆ ಏರಿದೆ. ಅವಶೇಷಗಳಡಿ ಸಿಲುಕಿದ್ದ ಮತ್ತೊಬ್ಬ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತನನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಧ್ರುವ(56) ಎಂದು ಗುರುತಿಸಲಾಗಿದೆ. ಧ್ರುವನ ಶವವನ್ನು ರಕ್ಷಣಾ ಸಿಬ್ಬಂದಿ ಹೊರ ತೆಗೆದಿದ್ದಾರೆ. ಬಿಬಿಎಂಪಿ, ಎನ್'ಡಿ'ಆರ್'ಎಫ್, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ಮುಂದುವರೆಸಲಾಗಿದೆ. ಮತ್ತೊಬ್ಬ ಕಾರ್ಮಿಕ ಸಂಶುಲ್(23)ಗಾಗಿ ಶೋಧ ಕಾರ್ಯ ನಡೆದಿದೆ. ಕಟ್ಟಡ ಮಾಲೀಕರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ.