
ತಿರುವನಂತಪುರ : ಕೇರಳ ಹಾಗೂ ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಳ್ಳುತ್ತಿದೆ.
ಆದರೆ ಇದೇ ವೇಳೆ ಮತ್ತೊಮ್ಮೆ ಕೇರಳದಲ್ಲಿ ಭಾರಿ ಮಳೆ ಸುರಿಯುವ ಬಗ್ಗೆ ಹೈ ಅಲರ್ಟ್ ನೀಡಲಾಗಿದೆ. ಸೆಪ್ಟೆಂಬರ್ 25 ಹಾಗೂ 26ರಂದು ಅತ್ಯಧಿಕ ಪ್ರಮಾಣದಲ್ಲಿ ಸುರಿಯಲಿದೆ ಎಂದು ಹವಾಮಾಣ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ತ್ರಿಶೂರ್, ಪಾಲಕ್ಕಾಡ್ ಇಡುಕ್ಕಿ, ವಯನಾಡು ಸೇರಿದಂತೆ ಐದು ಜಿಲ್ಲೆಗಳಲ್ಲಿ 64ರಿಂದ 124 ಮಿಲಿ ಮೀಟರ್ ಮಳೆ ಸುರಿಯಬಹುದು ಎಂದು ಮುಖ್ಯಮಂತ್ರಿ ಕಚೇರಿ ಎಚ್ಚರಿಕೆ ನೀಡಿದೆ.
ಅಲ್ಲದೇ ಈ ಐದು ಜಿಲ್ಲೆಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ಕಾರ ಜಿಲ್ಲಾಡಳಿತಗಳಿಗೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.