ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಸವಾಲು : ಗೆಲುವಿನ ಉಮೇದಿನಲ್ಲಿ ಕಾಂಗ್ರೆಸ್

Published : Dec 10, 2018, 08:31 AM IST
ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಸವಾಲು : ಗೆಲುವಿನ ಉಮೇದಿನಲ್ಲಿ ಕಾಂಗ್ರೆಸ್

ಸಾರಾಂಶ

ದೇಶದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಗುತ್ತಿದೆ. ಇದೇ ಹಲವು ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೆ, ಕಾಂಗ್ರೆಸ್ ಗೆ ಗೆಲುವಿನ ಭರವಸೆ ಹೆಚ್ಚಾಗಿದೆ. 

ನವದೆಹಲಿ: 5 ತಿಂಗಳಲ್ಲಿ ಎದುರಾಗಲಿರುವ ಲೋಕಸಭೆ ಚುನಾವಣೆ ಮೇಲೆ ಮಹತ್ವದ ರಾಜಕೀಯ ಪರಿಣಾಮ ಬೀರಬಲ್ಲದು ಎಂದೇ ವಿಶ್ಲೇಷಿಸಲಾಗಿರುವ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗ
ಲಿದೆ. ಬಿಜೆಪಿ ಆಳ್ವಿಕೆಯ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಅಧಿಕಾರ ನಡೆಸುತ್ತಿರುವ ತೆಲಂಗಾಣ ಹಾಗೂ ಕಾಂಗ್ರೆಸ್ ಹಿಡಿತದಲ್ಲಿರುವ ಮೀಜೋರಂನಲ್ಲಿ ಬೆಳಗ್ಗೆ ೮ರಿಂದ ಮತ ಎಣಿಕೆ
ಪ್ರಾರಂಭವಾಗಲಿದ್ದು, ಬೆಳಗ್ಗೆ 11ರ ವೇಳೆಗೆ  ಸ್ಪಷ್ಟ ಚಿತ್ರಣ ಲಭಿಸುವ ನಿರೀಕ್ಷೆ ಇದೆ.

ಕಾಂಗ್ರೆಸ್ ಆಳುತ್ತಿದ್ದ ರಾಜ್ಯಗಳನ್ನು ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಒಂದಾದ ಮೇಲೊಂದ ರಂತೆ ಕಸಿದುಕೊಳ್ಳುವಲ್ಲಿ ಯಶಸ್ವಿ ಯಾಗಿರುವ ಬಿಜೆಪಿಗೆ ತನ್ನ ನಿಯಂತ್ರಣದಲ್ಲಿರುವ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢವನ್ನು ಉಳಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ. ಕಳೆದ ವರ್ಷ ನಡೆದ ಗುಜರಾತ್ ಚುನಾವಣೆಯಲ್ಲಿ ಇಂತಹದೇ ಪರಿಸ್ಥಿತಿ ಎದುರಿಸಿದ್ದ ಬಿಜೆಪಿ, ಅದರಲ್ಲಿ ಯಶಸ್ವಿಯಾಗಿತ್ತು. ಅದೇ ಯಶಸ್ಸನ್ನು ಈ ಬಾರಿಯೂ ನಿರೀಕ್ಷಿಸುತ್ತಿದೆ. 

ಛತ್ತೀಸ್‌ಗಢದಲ್ಲೂ ಜಯಭೇರಿ ಬಾರಿಸುವ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಜತೆಗೆ ತೆಲುಗುದೇಶಂ ಮತ್ತಿತರ ಪಕ್ಷಗಳ ಜತೆ ಮಾಡಿಕೊಂಡಿರುವ ಮಹಾಕೂಟದ ನೆರವಿನಿಂದ ತೆಲಂಗಾಣದಲ್ಲೂ ಅಧಿಕಾರ ಹಿಡಿಯುವ ಉಮೇದಿಯಲ್ಲಿದೆ. ಜತೆಗೆ ಮೀಜೋರಂನಲ್ಲಿ ಅಧಿಕಾರ ಉಳಿಸಿಕೊಳ್ಳುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ. ಆದರೆ ಮತದಾರ ಏನು ನಿರ್ಧಾರ ಮಾಡಿದ್ದಾನೆ ಎಂಬುದು ಮತಯಂತ್ರಗಳಲ್ಲಿ ಭದ್ರವಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಹಾಗೂ ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಮಧ್ಯಪ್ರದೇಶ, ಛತ್ತೀಸ್‌ಗಢ ವಿಚಾರದಲ್ಲಿ ಸಮೀಕ್ಷೆಗಳು ಅತಂತ್ರವಾಗಿವೆ. ಇನ್ನು ಮೀಜೋರಂನಲ್ಲಿ ಯಾರಿಗೂ ಬಹುಮತ ಬಾರದು 
ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ