
ನವದೆಹಲಿ(ಡಿ.16): ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದಿಗೆ ಐದು ವರ್ಷಗಳಾದವು. 2012, ಡಿ.16ರಂದು ನಡೆದ ಈ ಭೀಕರ ಅತ್ಯಾಚಾರ, ಹತ್ಯೆ ಪ್ರಕರಣದ ದೋಷಿಗಳಿಗೆ ಮರಣ ದಂಡನೆ ಘೋಷಣೆಯಾಗಿದ್ದರೂ ಇನ್ನೂ ಶಿಕ್ಷೆ ಜಾರಿಯಾಗಿಲ್ಲ.
ಪ್ರಕರಣದ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಪ್ರತಿಭಟನೆಗಳು ನಡೆದು, ಅತ್ಯಾಚಾರ ಪ್ರಕರಣಗಳಿಗೆ ಕಠಿಣ ಶಿಕ್ಷೆ ನೀಡುವ ಕುರಿತಂತೆ ಒತ್ತಾಯಗಳು ಕೇಳಿ ಬಂದಿದ್ದವು. ದೋಷಿಗಳಾದ ಪವನ್, ವಿನಯ್, ಮುಕೇಶ್ ಸಿಂಗ್ ಮತ್ತು ಅಕ್ಷಯ್ ಕುಮಾರ್ ಸಿಂಗ್'ಗೆ ಮರಣ ದಂಡನೆ ಘೋಷಣೆಯಾಗಿದೆ.
ಐದನೇ ಆರೋಪಿ ರಾಮ್ ಸಿಂಗ್ ಜೈಲ್'ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಲಪರಾಧಿಯೊಬ್ಬ ಶಿಕ್ಷೆ ಪೂರ್ಣಗೊಳಿಸಿ ಬಿಡುಗಡೆಯಾಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.