
ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಸಾಕಷ್ಟುಕೊಡುಗೆ ನೀಡಿದೆ. ಆ ಎಲ್ಲ ಕೆಲಸ ಪೂರ್ಣಗೊಳ್ಳಲು ಮತ್ತಷ್ಟುವರ್ಷ ಅವರು ಅಧಿಕಾರದಲ್ಲಿರಬೇಕು ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು- ಕೊಡಗು ಲೋಕಸಭಾ ಸದಸ್ಯ ಪ್ರತಾಪ ಸಿಂಹ ಶನಿವಾರ ಅರಮನೆಗೆ ತೆರಳಿ ಕೇಂದ್ರ ಸರ್ಕಾರದ ನಾಲ್ಕು ವರ್ಷದ ಸಾಧನೆಯ ಪುಸ್ತಕ ನೀಡಿದ ಬಳಿಕ ಪ್ರತಿಕ್ರಿಯಿಸಿದ ಯದುವೀರ, ಕೇಂದ್ರ ಸರ್ಕಾರ 4 ವರ್ಷದಲ್ಲಿ ಸಾಕಷ್ಟುಕೆಲಸ ಮಾಡಿದೆ.
ಆ ಕೆಲಸಗಳನ್ನು ಸಂಪೂರ್ಣಗೊಳಿಸಲು ಅವರಿಗೆ 5 ವರ್ಷ ಸಾಲುವುದಿಲ್ಲ. ಮತ್ತಷ್ಟುವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರದಲ್ಲಿರಬೇಕು. ಆಗ ಮಾತ್ರ ಕೆಲಸಗಳು ಸಂಪೂರ್ಣಗೊಳ್ಳುತ್ತವೆ. ಆದ್ದರಿಂದ ನಾವೆಲ್ಲರೂ ಒಳ್ಳೆಯ ಕೆಲಸ ಮಾಡುವವರಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.