
ಮುಂಬೈ [ಜು.29]: ಶೀಘ್ರದಲ್ಲೇ ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಯಲಿದ್ದು, ಇದೇ ವೇಳೆ 50ಕ್ಕೂ ಕಾಂಗ್ರೆಸ್ ಹಾಗೂ NCP ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರ ನೀರಾವರಿ ಸಚಿವ ಗಿರಿಶ್ ಮಹಾಜನ್ ತಮ್ಮೊಂದಿಗೆ ಕಾಂಗ್ರೆಸಿಗರು ಸಂಪರ್ಕ ಹೊಂದಿರುವ ವಿಚಾರ ತಿಳಸಿದ್ದಾರೆ.
ಈಗಾಗಲೇ NCP ನಾಯಕಿ ಚಿತ್ರಾ ವಾಘ್ ತಮ್ಮ ಅಸಮಾಧಾನ ಹೊರಹಾಕಿದ್ದು, ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದ್ದಾರೆ. ತಮ್ಮ ಪಕ್ಷದಲ್ಲಿ ಭವಿಷ್ಯ ಇಲ್ಲದ ಕಾರಣ ಇಂತಹ ನಿರ್ಧಾರ ಕೈಗೊಂಡಿದ್ದಾರೆ ಎಂದರು.
ಬಿಜೆಪಿ ಜೊತೆ ಕೈ ಜೋಡಿಸುವ ಸುಳಿವು ಕೊಟ್ಟ ಕಾಂಗ್ರೆಸ್ ಅನರ್ಹ ಶಾಸಕ
ಶೀಘ್ರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಬಿಜೆಪಿ ಸೇರ್ಪಡೆಯಾಗುವುದಾಗಿ ಕೇಳಿಕೊಂಡಿದ್ದಾರೆ. ಕೆಲ ವಾರಗಳಲ್ಲಿ ಎಲ್ಲರೂ ಸ್ವಪಕ್ಷ ತೊರೆಯಲಿದ್ದಾರೆ ಎಂದು ಗಿರೀಶ್ ತಿಳಿಸಿದ್ದಾರೆ.
ಕೈ ಕೊಟ್ಟ ಶಾಸಕ : ಬಿಜೆಪಿಗೆ ಸೇರ್ಪಡೆ
ಈಗಾಗಲೇ NCP ಮುಂಬೈ ಘಟಕದ ಅಧ್ಯಕ್ಷ ಸಚಿನ್ ಅಹಿರ್ ಹಾಗೂ ಶಾಸಕ ವೈಭವ್ ಈಗಾಗಲೇ ಬಿಜೆಪಿ ಸೇರ್ಪಡೆಯಾಗಿದ್ದು, ಸೇರುವವರ ಸಂಖ್ಯೆ ಬೆಳೆಯುತ್ತಲೇ ಇದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.