ರಾಮನಗರದಲ್ಲಿ ಪತ್ತೆಯಾಯ್ತು 500 ರೂ. ಖೋಟಾ ನೋಟು

Published : Sep 09, 2017, 05:18 PM ISTUpdated : Apr 11, 2018, 01:06 PM IST
ರಾಮನಗರದಲ್ಲಿ ಪತ್ತೆಯಾಯ್ತು 500 ರೂ. ಖೋಟಾ ನೋಟು

ಸಾರಾಂಶ

ರೈತ ಸುಜೀವನ್ ಕುಮಾರ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ಹಣ ನೀಡಿದ ವರ್ತಕ ಯಾರೆಂದು ಪತ್ತೆ ಹಚ್ಚುವಂತೆ ಆಗ್ರಹಿಸಿದರು. 

ರಾಮನಗರ(ಸೆ.09): ರೈತನಿಗೆ ವರ್ತಕನೊಬ್ಬ 500 ರೂಪಾಯಿಯ ಜೆರಾಕ್ಸ್​ ನೋಟು ನೀಡಿ ಯಾಮಾರಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣದ ರೈತ ಸುಜೀವನ್​ಕುಮಾರ್​ ಎಪಿಎಂಸಿಯಲ್ಲಿ ಟೊಮ್ಯಾಟೋ ಮಾರಾಟ ಮಾಡಿದ್ದಾನೆ. ಈ ವೇಳೆ ವರ್ತಕ 500 ರೂಪಾಯಿಯ ಝೆರಾಕ್ಸ್​ ನೋಟು ನೀಡಿ ಪರಾರಿಯಾಗಿದ್ದಾನೆ.

ರೈತ ಸುಜೀವನ್​ ಕುಮಾರ್​ ಹಣ ಎಣಿಸಿಕೊಳ್ಳುವ ವೇಳೆ ತನಗೆ ಮೋಸ ಮಾಡಿರೋದು ಗೊತ್ತಾಗುತ್ತೆಸ. ಆದರೆ ಅಷ್ಟರಲ್ಲಾಗಲೇ ನಕಲಿ ನೋಟು ನೀಡಿದ್ದವ  ಸ್ಥಳದಿಂದ ಕಾಲ್ಕಿತ್ತಿದ್ದಾನೆ. ರೈತ ಸುಜೀವನ್ ಕುಮಾರ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ಹಣ ನೀಡಿದ ವರ್ತಕ ಯಾರೆಂದು ಪತ್ತೆ ಹಚ್ಚುವಂತೆ ಆಗ್ರಹಿಸಿದರು.  ಮಾರುಕಟ್ಟೆಯಲ್ಲಿ ಖೋಟಾನೋಟುಗಳ ಹಾವಳಿ ಹೆಚ್ಚಾಗುತ್ತಿದೆ. ಕೂಡಲೇ ಪೊಲೀಸ್ರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking ಸ್ಮೋಕ್ ಬಾಂಬ್ ಎಸೆದು ಸಿಕ್ಕ ಸಿಕ್ಕವರಿಗೆ ಚಾಕು ಇರಿದ ದುಷ್ಕರ್ಮಿ, 3 ಸಾವು, ಐವರು ಗಂಭೀರ
ಶಕ್ತಿಯಡಿ ಸರ್ಕಾರದಿಂದ ಸಾರಿಗೆ ನಿಗಮಕ್ಕೆ ₹4000 ಕೋಟಿ ಬಾಕಿ: ಸಚಿವ ರಾಮಲಿಂಗಾರೆಡ್ಡಿ