
ನವದೆಹಲಿ[ಮೇ.26]: ಈ ಬಾರಿಯ ಲೋಕಸಭಾ ಚುನಾವಣೆ ವೇಳೆ ವಿವಿಧ ರಾಜಕೀಯ ಪಕ್ಷಗಳು ಹಾಲಿ ಸಂಸದರ ಜೊತೆ, ಹಲವು ಶಾಸಕರನ್ನೂ ಕಣಕ್ಕೆ ಇಳಿಸಿದ್ದವು. ಈ ಪೈಕಿ 14 ರಾಜ್ಯಗಳ 49 ಶಾಸಕರು ಆಯ್ಕೆಯಾಗಿದ್ದಾರೆ.
ಇದಲ್ಲದೆ ಇಬ್ಬರು ವಿಧಾನಪರಿಷತ್ ಸದಸ್ಯರು ಮತ್ತು 4 ರಾಜ್ಯಸಭಾ ಸದಸ್ಯರು ಕೂಡಾ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಮುಂದಿನ ಕೆಲ ತಿಂಗಳುಗಳಲ್ಲಿ ಈ ಶಾಸಕ ಸ್ಥಾನಕ್ಕೆ ಮತ್ತೆ ಉಪಚುನಾವಣೆ ನಡೆಸಬೇಕಿದೆ.
ಆದರೆ ಇನ್ನು 6 ತಿಂಗಳಲ್ಲಿ ಮಹಾರಾಷ್ಟ್ರ, ಜಾರ್ಖಂಡ ಮತ್ತು ಹರ್ಯಾಣ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಕಾರಣ, ಈ ರಾಜ್ಯಗಳಿಂದ ಲೋಕಸಭೆಗೆ ಆಯ್ಕೆಯಾದ 9 ಶಾಸಕರ ಕ್ಷೇತ್ರಗಳಿಗೆ ಉಪಚುನಾವಣೆ ಅವಶ್ಯಕತೆ ಇಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.