59 ಮಂದಿ ಉಗ್ರ ಸಂಘಟನೆ ಸೇರ್ಪಡೆ...!

Published : Jan 03, 2017, 02:26 PM ISTUpdated : Apr 11, 2018, 01:01 PM IST
59 ಮಂದಿ ಉಗ್ರ ಸಂಘಟನೆ ಸೇರ್ಪಡೆ...!

ಸಾರಾಂಶ

ಕಾಣೆಯಾಗಿರುವ ಯುವಕರು ಹಾಗೂ ಉಗ್ರರು ಹಿಂಸೆ ತ್ಯಜಿಸಿ ಭಾರತದ ಐಕ್ಯತೆ ಹಾಗೂ ಸಂವಿಧಾನವನ್ನು ಒಪ್ಪಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದ ಪುನರ್ವಸತಿ ಯೋಜನೆ ಸಹಕಾರಿಯಾಗಿದೆ. - ಮೆಹಬೂಬಾ ಮುಫ್ತಿ

ಜಮ್ಮು(ಜ.03): ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಉಗ್ರ ಬುರ್ಹಾನ್ ವಾನಿಯನ್ನು ಸೇನೆಯು ಹತ್ಯೆಗೈದ ಬಳಿಕ ಕಣಿವೆ ರಾಜ್ಯದ 59 ಮಂದಿ ಯುವಕರು ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದಾರೆ ಎಂದು ಜಮ್ಮು-ಕಾಶ್ಮೀರ ಸರ್ಕಾರ ತಿಳಿಸಿದೆ.

ವಿಧಾನಸಭೆಯಲ್ಲಿ ಶಾಸಕ ಮುಬಾರಕ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಿಎಂ ಮೆಹಬೂಬಾ ಮುಫ್ತಿ, ‘‘ಕಳೆದ ವರ್ಷ ಜು. 8ರಂದು ಬುರ್ಹಾನ್‌'ನನ್ನು ಎನ್‌ಕೌಂಟರ್ ಮಾಡಿದ ನಂತರ 59 ಯುವಕರು ಉಗ್ರ ಸಂಘಟನೆಗಳಿಗೆ ಸೇರಿದ್ದಾರೆ ಎಂದು ಸಿಐಡಿ ಪ್ರಧಾನ ಕಚೇರಿ ಮಾಹಿತಿ ನೀಡಿದೆ,’’ ಎಂದು ಹೇಳಿದ್ದಾರೆ.

ಕಾಣೆಯಾಗಿರುವ ಯುವಕರು ಹಾಗೂ ಉಗ್ರರು ಹಿಂಸೆ ತ್ಯಜಿಸಿ ಭಾರತದ ಐಕ್ಯತೆ ಹಾಗೂ ಸಂವಿಧಾನವನ್ನು ಒಪ್ಪಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದ ಪುನರ್ವಸತಿ ಯೋಜನೆ ಸಹಕಾರಿಯಾಗಿದೆ ಎಂದೂ ಹೇಳಿದ್ದಾರೆ.

ರಾಜ್ಯ ಸರ್ಕಾರದ ಹೊಸ ಯೋಜನೆಯ ಪ್ರಕಾರ ಶರಣಾದ ಉಗ್ರಗಾಮಿಯ ಖಾತೆಗೆ 1.50 ಲಕ್ಷ ರೂಪಾಯಿ ಪಿಕ್ಸೆಡ್ ಡೆಪಾಸಿಡ್(ಎಫ್'ಡಿ) ಮಾಡಲಾಗುತ್ತದೆ. ಈ ಯೋಜನೆಯಡಿ 2004ರಿಂದ ಇಲ್ಲಿಯವರೆಗೆ 437 ಪ್ರಕರಣಗಳಲ್ಲಿ ಭಾಗಿಯಾದ ಉಗ್ರಗಾಮಿಗಳು ಶರಣಾಗಿದ್ದಾರೆ ಎಂದು ಮೆಹಬೂಬ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಕ್ಲು ಶಿವ ಕೊಲೆ ಪ್ರಕರಣ: ನಾಪತ್ತೆ ಆಗಿರುವ ಬೈರತಿ ಬಸವರಾಜು ವಿರುದ್ಧ ಲುಕ್ ಔಟ್ ನೋಟಿಸ್
ಜರ್ಮನಿಯಲ್ಲೂ ‘ಮತಚೋರಿ’ ಆರೋಪ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ