ಅಮರ್'ನಾಥ್ ಯಾತ್ರಿಕರ ಮೇಲಿನ ಉಗ್ರರ ದಾಳಿಗೆ 7 ಸಾವು

Published : Jul 10, 2017, 10:00 PM ISTUpdated : Apr 11, 2018, 01:09 PM IST
ಅಮರ್'ನಾಥ್ ಯಾತ್ರಿಕರ ಮೇಲಿನ ಉಗ್ರರ ದಾಳಿಗೆ 7 ಸಾವು

ಸಾರಾಂಶ

ಭಯೋತ್ಪಾದಕರು ದಾಳಿ ನಡೆಸಿದ ವೇಳೆ ರಾತ್ರಿ 8.30ರ ಸಮಯವಾಗಿದ್ದು, ಸಿಆರ್'ಪಿಎಫ್ ಯೋಧರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ನವದೆಹಲಿ(ಜು.10): ಜಮ್ಮು ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ  ಅಮರ'ನಾಥ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 5 ಮಂದಿ ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ.

ಅನಂತ್'ನಾಗ್ ಜಿಲ್ಲೆಯ ಬೇತಾಂಗೂ ಹಾಗೂ ಖಾನಾಬಾಲ್ ಪ್ರದೇಶಗಳಲ್ಲಿ ಪೊಲೀಸರು ಭದ್ರತೆ ಒದಗಿಸುತ್ತಿದ್ದ ಸ್ಥಳದಲ್ಲಿ   ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯತ್ರಿಕರಿದ್ದ ಬಸ್ ತೆರಳುತ್ತಿತ್ತು. ಇಬ್ಬರು ಯಾತ್ರಿಕರು ಸ್ಥಳದಲ್ಲೇ ಮೃತಪಟ್ಟರೆ, ಉಳಿದವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳದಿದ್ದಾರೆ' ಎಂದು ಕಾಶ್ಮೀರದ ಐಜಿಪಿ ಮುನೀರ್ ಖಾನ್ ತಿಳಿಸಿದ್ದಾರೆ.

ಭಯೋತ್ಪಾದಕರು ದಾಳಿ ನಡೆಸಿದ ವೇಳೆ ರಾತ್ರಿ 8.30ರ ಸಮಯವಾಗಿದ್ದು, ಸಿಆರ್'ಪಿಎಫ್ ಯೋಧರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಮೂಲಗಳ ಪ್ರಕಾರ ಯಾತ್ರಿಗಳ ಬಸ್ ಗುಜರಾತ್'ನಿಂದ ತೆರಳುತ್ತಿತ್ತು. ಈ ವರ್ಷ 1.2 ಲಕ್ಷ ಮಂದಿ ಯಾತ್ರಿಗೆ ತೆರಳಲು ನೋಂದಾಯಿಸಿದ್ದಾರೆ. ಘಟನೆಯನ್ನು ಹಲವು ಗಣ್ಯರು ಖಂಡಿಸಿದ್ದು, ದಾಳಿಯ ಬಗ್ಗೆ ಕಾಶ್ಮೀರ ಸಿಎಂ ಮೆಹಬೂಬ ಮುಫ್ತಿ ಅವರೊಂದಿಗೆ ದೂರವಾಣಿ ಮೂಲಕ ಕೇಂದ್ರ ಗೃಹ ಸಚಿವ  ವಿವರಣೆ ಪಡೆದು ಭದ್ರತೆ ಹೆಚ್ಚಿಸುವಂತೆ ಸೂಚಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

(ಸಂಗ್ರಹ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಟಿಯರು ಬೆಳ್ಳಿತೆರೆಯ ಮಿಂಚಲು ಸೀಕ್ರೆಟ್ ಹೇಳಿದ ರಶ್ಮಿಕಾ ಮಂದಣ್ಣ.. ನೇರ ಮಾತು ಹೊಸ ವಿವಾದ ಹುಟ್ಟುಹಾಕುತ್ತಾ?
ಬಿಜೆಪಿ ಅಲ್ಲ, ಈ ಬಾರಿ ಸಿಪಿಎಂ? ಶಶಿ ತರೂರ್ 'ಕಮ್ಯುನಿಸ್ಟ್' ಆಗ್ತಾರಾ? ಏನಿದು 'ದುಬೈ' ಕನೆಕ್ಷನ್?