
ನವದೆಹಲಿ(ಮಾ.18): ಪ್ರತಿ ವರ್ಷ ತಾಂತ್ರಿಕ ಶಿಕ್ಷಣ (ಎಂಜಿನಿಯರಿಂಗ್) ಕೋರ್ಸುಗಳನ್ನು ಮುಗಿಸಿ ಹೊರಬರುವ 8 ಲಕ್ಷ ಎಂಜಿನಿಯರಿಂಗ್ ಪದವೀಧರರಲ್ಲಿ ಶೇ.60ರಷ್ಟು ಜನ ನಿರುದ್ಯೋಗಿಗಳಾಗಿಯೇ ಉಳಿಯುತ್ತಾರೆ. ಹೀಗೆಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ನೀಡಿದ ಅಂಕಿ ಅಂಶಗಳೇ ಹೇಳಿವೆ.
ಇದರಿಂದಾಗಿ ಪ್ರತಿ ವರ್ಷ 20 ಲಕ್ಷ ಮಾನವ ದಿನಗಳು ನಷ್ಟವಾಗುತ್ತವೆ ಎಂದು ಎಐಸಿಟಿಇ ಕಳವಳ ವ್ಯಕ್ತಪಡಿಸಿದೆ. ಇದೇ ವೇಳೆ, 3200 ಶಿಕ್ಷಣ ಸಂಸ್ಥೆಗಳಲ್ಲಿ ಶೇ.15 ಎಂಜಿನಿಯರಿಂಗ್ ಕೋರ್ಸುಗಳು ಮಾತ್ರ ನ್ಯಾಷನಲ್ ಬೋರ್ಡ್ ಆಫ್ ಅಕ್ರೆಡಿಟೇಶನ್'ನಿಂದ ನೋಂದಾಯಿತವಾಗಿವೆ. ಕೇವಲ ಶೇ.1ರಷ್ಟು ವಿದ್ಯಾರ್ಥಿಗಳು ಮಾತ್ರ ಬೇಸಿಗೆ ತರಬೇತಿಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅದು ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.