ಥಾಯ್ಲೆಂಡ್: ಗುಹೆಯಿಂದ ಆರು ಬಾಲಕರು ಹೊರಕ್ಕೆ!

Published : Jul 08, 2018, 06:24 PM IST
ಥಾಯ್ಲೆಂಡ್: ಗುಹೆಯಿಂದ ಆರು ಬಾಲಕರು ಹೊರಕ್ಕೆ!

ಸಾರಾಂಶ

ಥಾಯ್ಲೆಂಡ್ ಗುಹೆಯಿಂದ ಆರು ಬಾಲಕರು ಹೊರಕ್ಕೆ ಬಾಲಕರನ್ನು ಸುರಕ್ಷಿತವಾಗಿ ಹೊರ ತೆಗೆದ ರಕ್ಷಣಾ ಸಿಬ್ಬಂದಿ ಗುಹೆಯಲ್ಲಿ ಇನ್ನೂ ಆರು ಬಾಲಕರು, ಓರ್ವ ಕೋಚ್ ಭರದಿಂದ ಸಾಗಿದೆ ರಕ್ಷಣಾ ಕಾರ್ಯಾಚರಣೆ

ಬ್ಯಾಂಕಾಕ್(ಜು.8): ಮಹತ್ವದ ಬೆಳವಣಿಗೆಯೊಂದರಲ್ಲಿ ಥಾಯ್ಲೆಂಡ್ ನ ಗುಹೆಯೊಂದರಲ್ಲಿ ಸಿಲುಕಿರುವ ಫುಟ್ಬಾಲ್ ಆಟಗಾರರ ಪೈಕಿ ಆರು ಬಾಲಕರನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರತೆಗೆದಿದೆ.

ನುರಿತ ಈಜುಗಾರರ ಸಹಾಯದಿಂದ ಮಕ್ಕಳನ್ನು ರಕ್ಷಿಸುವ ಕಾರ್ಯಾಚರಣೆ ಕಳೆದ 10 ದಿನಗಳಿಂದಲೂ ನಡೆಯುತ್ತಿದೆ. ದೇಶಿ ಮತ್ತು ವಿದೇಶಿ ನುರಿತ ತಂತ್ರಜ್ಞರು ನಿರಂತರವಾಗಿ ಪ್ರಯತ್ನ ನಡೆಸಿ ಆರು ಬಾಲಕರನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ರಕ್ಷಿಸಲ್ಪಟ್ಟ ಆರು ಬಾಲಕರು ತುಂಬ ಬಳಲಿದ್ದು, ಕುಡಲೇ ಆವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗುಹೆಯಲ್ಲಿ ಇನ್ನೂ ಆರು ಬಾಲಕರು ಮತ್ತು ಓರ್ವ ಕೋಚ್ ಸಿಲುಕಿಕೊಂಡಿದ್ದು, ಅವರನ್ನು ಹೊರತೆಗೆಯಲು ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!