
ಉ.ಪ್ರ(ನ.20): ಉತ್ತರಪ್ರದೇಶದ ಪುಖರಾಯಾ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ 45ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಝಾನ್ಸಿ-ಕಾನ್ಪುರ ರೈಲ್ವೇ ಮಾರ್ಗದಲ್ಲಿ 14 ಬೋಗಿಗಳಿದ್ದ ಇಂದೋರ್ ಪಾಟ್ನಾ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 3.15ರ ಸುಮಾರಿಗೆ ಹಳಿ ತಪ್ಪಿದ್ದರಿಂದಾಗಿ ಪುಖರಾಯಾ ರೈಲ್ವೇ ಸ್ಟೇಷನ್ ಬಳಿ ದುರ್ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ 63ಕ್ಕೂ ಹೆಚ್ಚು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿರುವ ಪೊಲೀಸರು ಸ್ಥಳೀಯ ನೆರವಿನೊಂದಿಗೆ ಹಲವರನ್ನು ರಕ್ಷಿಸಿದ್ದಾರೆ. ಸದ್ಯ 30 ಮೃತದೇಹಗಳನ್ನು ಹೊರತೆಗೆಯಲಾಗಿದ. ಭೀಕರ ರೈಲು ದುರಂತವಾಗಿರುವುದರಿಂದ ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.
ಝಾನ್ಸಿ-ಕಾನ್ಪುರ ರೈಲ್ವೆ ಮಾರ್ಗದಲ್ಲಿ ದುರಂತ ಸಂಭವಿಸಿದರಿಂದ ಹಲವು ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ. ರೈಲು ದುರಂತದ ಸಂಬಂಧ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಸೂಚನೆ ಮೇರೆಗೆ ಎನ್ಡಿಆರ್ಎಫ್ ತಂಡ ಘಟನಾ ಸ್ಥಳಕ್ಕೆ ತೆರಳಲಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹೆಲ್ಪ್ಲೈನ್ಗೆ ಕರೆ ಮಾಡಲು ಸೂಚನೆ
ಕಾನ್ಪುರ - 05121072
ರಾಟ್ಲಾಮ್ - 074121072
ಝಾನ್ಸಿ - 05101072
ಇಂದೋರ್ - 07311072
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.