
ಕನಕಪುರ : ತಾಲೂಕಿನ ಉಯ್ಯಂಬಳ್ಳಿ ಹೋಬಳಿ ಮರೀಗೌಡನದೊಡ್ಡಿ ಗ್ರಾಮದಲ್ಲಿ ವಿಸ್ಮಯಕಾರಿಯಾದ ಏಳು ತಲೆ ಸರ್ಪದ ಹಾವಿನ ಪೊರೆ ದೊರೆತಿದ್ದು, ಅದಕ್ಕೆ ಈಗ ಭಕ್ತರಿಂದ ಪೂಜಾ ಕಾರ್ಯ ಪ್ರಾರಂಭವಾಗಿದೆ. ಮರೀಗೌಡನದೊಡ್ಡಿ ಬಳಿಯ ನಿರ್ಜನ ಪ್ರದೇಶದಲ್ಲಿ ಏಳು ತಲೆ ಸರ್ಪದ ಪೊರೆಯೊಂದು ಇರುವುದನ್ನು ಗಮನಿಸಿದವರು, ಗ್ರಾಮದಲ್ಲಿ ಬಂದು ತಿಳಿಸಿದ್ದಾರೆ. ಆಶ್ಚರ್ಯಚಕಿತರಾದ ಜನತೆ ಅದನ್ನು ನೋಡಲು ಗುಂಪು ಗುಂಪಾಗಿ ಹೋಗಿ ನೋಡಿದ್ದಾರೆ.
ಮೊದಲಿಗೆ ಅನುಮಾನ ವ್ಯಕ್ತಪಡಿಸಿ ಯಾರೋ ಬೇಕೆಂದು ಪೊರೆಗಳನ್ನು ಸೇರಿಸಿ ಹೀಗೆ ಮಾಡಿರಬಹುದೆಂದು ನೋಡಿದ್ದಾರೆ. ಆದರೆ ವಾಸ್ತವದಲ್ಲಿ ಒಂದು ಪೊರೆಗೆ ಏಳು ತಲೆಯು ಇರುವುದು ಸತ್ಯವಾಗಿ ಕಂಡಾಗ ಜನತೆಗೆ ಇನ್ನಷ್ಟುಆಶ್ಚರ್ಯ ಮತ್ತು ನಾಗದೇವರ ಮೇಲೆ ಭಕ್ತಿ ಹೆಚ್ಚಾಗಿ ಪೂಜೆ ಮಾಡಲು ಶುರುಮಾಡಿದ್ದಾರೆ.
ಗ್ರಾಮದ ಸಮೀಪದಲ್ಲಿ ಏಳು ತಲೆಯ ಸರ್ಪದ ಪೊರೆ ಇದೆ ಎಂದಾದರೆ ಇಲ್ಲಿ ಎಲ್ಲೋ ಸಮೀಪದಲ್ಲೇ ಏಳು ತಲೆಯ ಸರ್ಪವಿರುವುದು ಸತ್ಯ, ಅದನ್ನು ನೋಡಿದರೆ ನಮಗೆ ಪುಣ್ಯ, ಅದೃಷ್ಟಬರುತ್ತದೆ ಎಂಬುದು ಇಲ್ಲಿನ ಜನತೆಯ ನಂಬಿಕೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.