
ಹೊಸೂರು : ಜವರಾಯ ಅಟ್ಟಹಾಸ ಮೆರೆದಿದ್ದು ಭೀಕರ ಅಪಘಾತದಲ್ಲಿ 7 ಜನ ದುರ್ಮರಣವನ್ನಪ್ಪಿದ ಘಟನೆ ತಮಿಳುನಾಡಿನ ಸೇಲಂನ ಬಳಿಯ ಮಾಮ್ಮಂಮ್ ನಲ್ಲಿ ರಾತ್ರಿ ಒಂದು ಗಂಟೆಗೆ ಸಂಭವಿಸಿದೆ.
ಇಬ್ಬರು ಮಹಿಳೆಯರು ಹಾಗೂ ಐವರು ಪುರುಷರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಸೇಲಂ ಕಡೇಗೆ ತೆರಳುತ್ತಿದ್ದ ಬಸ್ ಹಾಗೂ ಓಮಿನಿ ನಡುವೆ ಡಿಕ್ಕಿ ಸಂಭವಿಸಿ ಈ ಅವಘಡ ಸಂಭವಿಸಿದೆ.
ಇನ್ನು ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಬಸ್ಸ್ ಡಿಕ್ಕಿ ಹೊಡೆದಿದ್ದು ಈ ವೇಳೆ ಬಸ್ಸು ನಿಯಂತ್ರಣ ಕಳೆದುಕೊಂಡು ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಓಮಿನಿಗೆ ಡಿಕ್ಕಿ ಹೋಡೆದಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.