ಕೆಪಿಎನ್ ಟ್ರಾವೆಲ್ಸ್ ಬಸ್'ಗಳಿಗೆ ಬೆಂಕಿ ಇಟ್ಟಿದ್ದ 7 ಮಂದಿ ಬಂಧನ

Published : Sep 15, 2016, 08:30 AM ISTUpdated : Apr 11, 2018, 12:46 PM IST
ಕೆಪಿಎನ್ ಟ್ರಾವೆಲ್ಸ್ ಬಸ್'ಗಳಿಗೆ ಬೆಂಕಿ ಇಟ್ಟಿದ್ದ 7 ಮಂದಿ ಬಂಧನ

ಸಾರಾಂಶ

ಬೆಂಗಳೂರು (ಸೆ .15): ಕಾವೇರಿ ನೀರು ಹಂಚಿಕೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಮೊನ್ನೆ ಸಂಜೆ ಕೆಪಿಎನ್ ಟ್ರಾವೆಲ್ಸ್ ಗೆ ಸೇರಿದ್ದ ಸುಮಾರು 35 ಕ್ಕೂ ಹೆಚ್ಚು ಬಸ್ ಗಳಿಗೆ ಬೆಂಕಿ ಇಟ್ಟಿದ್ದ 7 ಮಂದಿಯನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಕ್ಷಿತ್ (18), ಸತೀಷ್ (27) ಕೆಂಪೇಗೌಡ (28), ಪ್ರಕಾಶ್ (46), ಲೋಕೇಶ್ (25), ಚಂದನ್ ಬಂಧಿತರಾಗಿದ್ದು, ಇವರೆಲ್ಲರೂ ಡಿಸೋಜಾ ನಗರ ವೀರ ಭದ್ರನಗರ ನಿವಾಸಿಗಳಾಗಿದ್ದು ಪೀಣ್ಯ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಅಂದು ನಡೆದ ಗಲಭೆ ವಿಡಿಯೋ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಆರೋಪಿಗಳ ಚಹರೆ ಪತ್ತೆಯಾಗಿದ್ದು, ಈ ಹಿನ್ನಲೆಯಲ್ಲಿ ಕಾರ್ಯಚರಣೆ ನಡೆಸಿದ ರಾಜರಾಜೇಶ್ವರಿನಗರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರ ವಿರುದ್ಧ ಕಾನೂನು ಬಾಹಿರವಾಗಿ ಗುಂಪುಗೂಡುವುದು (ಐಪಿಸಿ 143), ದೊಂಬಿ (147), ಮಾರಕಾಸ್ತ್ರ ಹಿಡಿದು ದೊಂಬಿ (148), ಮಾರಕಾಸ್ತ್ರಗಳಿಂದ ಹಲ್ಲೆ (324), ಸಾರ್ವಜನಿಕ ಆಸ್ತಿಗೆ ಹಾನಿ (427) ಹಾಗೂ ಬೆಂಕಿ ಹಚ್ಚಿ ಹಾನಿ ಮಾಡಿದ (435) ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಕ್ಕೆ ದೇವಳ ಆಮಂತ್ರಣ ಪತ್ರಿಕೆ ವಿವಾದ; ಪ್ರೊಟೊಕಾಲ್ ಹೆಸರಲ್ಲಿ ಅನ್ಯಧರ್ಮೀಯರ ಆಹ್ವಾನಕ್ಕೆ ತೀವ್ರ ವಿರೋಧ!
ಚಿನ್ನ-ಬೆಳ್ಳಿ ಖರೀದಿ ಇನ್ನೂ ಕನಸಿನ ಮಾತು; ಆದ್ರೂ ಒಂದ್ಸಾರಿ ಗುಂಡಿಗೆ ಗಟ್ಟಿ ಮಾಡ್ಕೊಂಡು ಬೆಲೆ ನೋಡಿ