ಪ್ರಾಣ ಹೋಗುತ್ತಿದ್ದರೂ ಸಾಲು ಬಿಡದ ಜನ! ಮನ ಕಲಕುವಂತಿದೆ ಈ ವಿಡಿಯೋ

Published : Dec 04, 2016, 04:27 PM ISTUpdated : Apr 11, 2018, 01:05 PM IST
ಪ್ರಾಣ ಹೋಗುತ್ತಿದ್ದರೂ ಸಾಲು ಬಿಡದ ಜನ! ಮನ ಕಲಕುವಂತಿದೆ ಈ ವಿಡಿಯೋ

ಸಾರಾಂಶ

ಲೋನ್ ಕೌಂಟರ್‌ನ ಕೆಳಗೆ ಪತಿಯನ್ನು ಮಡಿಲಲ್ಲಿ ಮಲಗಿಸಿಕೊಂಡು ಪತ್ನಿ ಕಣ್ಣೀರು ಹಾಕುತ್ತಿದ್ದರೂ, ಬ್ಯಾಂಕ್ ಸಿಬ್ಬಂದಿಯೂ ಕುಳಿತಲ್ಲಿಂದ ಅಲುಗಾಡಿಲ್ಲ.

ಚೆನ್ನೈ(ಡಿ.04): ಬ್ಯಾಂಕಿನಿಂದ ಹಣ ವಿತ್‌ಡ್ರಾ ಮಾಡಲೆಂದು ಕ್ಯೂನಲ್ಲಿ ನಿಂತಿದ್ದ 70 ವರ್ಷದ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ವಝ್‌ಕಾಯ್ ಗ್ರಾಮದ ಸುಬ್ರಮಣಿಯನ್, ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಹಣಕ್ಕಾಗಿ ಸಾಲಿನಲ್ಲಿ ನಿಂತಿದ್ದಾಗ, ಒಮ್ಮೆಗೇ ಕುಸಿದುಬಿದ್ದರು. ಗಾಬರಿಗೊಂಡ ಅವರ ಪತ್ನಿ ಸಹಾಯಕ್ಕಾಗಿ ಯಾಚಿಸಿದರೂ ಯಾರೂ ನೆರವಾಗಿಲ್ಲ. ಸಹಾಯಕ್ಕೆ ಬಂದರೆ ಕ್ಯೂ ತಪ್ಪುತ್ತದೆ ಎಂಬ ಭೀತಿಯಿಂದ ಎಲ್ಲರೂ ಅಮಾನವೀಯವಾಗಿ ವರ್ತಿಸಿದ್ದಾರೆ.

ಲೋನ್ ಕೌಂಟರ್‌ನ ಕೆಳಗೆ ಪತಿಯನ್ನು ಮಡಿಲಲ್ಲಿ ಮಲಗಿಸಿಕೊಂಡು ಪತ್ನಿ ಕಣ್ಣೀರು ಹಾಕುತ್ತಿದ್ದರೂ, ಬ್ಯಾಂಕ್ ಸಿಬ್ಬಂದಿಯೂ ಕುಳಿತಲ್ಲಿಂದ ಅಲುಗಾಡಿಲ್ಲ. ಕೊನೆಗೆ ಆ್ಯಂಬುಲೆನ್ಸ್ ಬಂದಾಗ ಸುಬ್ರಮಣಿಯನ್ ಅವರು ಕೊನೆಯುಸಿರೆಳೆದಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ