
ಜಕಾರ್ತ: ಭೀಕರ ಭೂಕಂಪ ಹಾಗೂ ಸುನಾಮಿಗೆ ತುತ್ತಾಗಿದ್ದ ಇಂಡೋನೇಷ್ಯಾದ ಪಲು ನಗರದ 5000 ಜನ ಇದುವರೆಗೂ ಪತ್ತೆಯಾಗಿಲ್ಲ. ಹೀಗಾಗಿ ಇವರೆಲ್ಲಾ ಭೂಕಂಪ ಮತ್ತು ಸುನಾಮಿಯಲ್ಲಿ ಸಾವಿಗೀಡಾಗಿರುವ ಆತಂಕ ಎದುರಾಗಿದೆ. ಪ್ರಕೃತಿ ವಿಕೋಪದಲ್ಲಿ ಪೆಟೊಬೊ ಹಾಗೂ ಬಾಲಾರೊವಾ ಪ್ರದೇಶಗಳು ಸಂಪೂರ್ಣವಾಗಿ ಕೊಚ್ಚಿಹೋಗಿವೆ.
ಇದುವರೆಗೆ 1763 ಮೃತ ದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ದುರಂತ ನಡೆದು ಒಂದು ವಾರ ಕಳೆದರೂ 5000 ಮಂದಿ ಇದುವರೆಗೂ ಪತ್ತೆಯಾಗಿಲ್ಲ.
ಗುಡ್ಡದ ಮಣ್ಣು ಹಾಗೂ ಅವಶೇಷಗಳ ಅಡಿಯಲ್ಲಿ ಬಹುತೇಕ ಪ್ರದೇಶಗಳು ಹೂತುಹೋಗಿದ್ದು, ಸಾವು ನೋವಿನ ಸಂಖ್ಯೆಯನ್ನು ನಿಖರವಾಗಿ ಲೆಕ್ಕಹಾಕಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ