ದೇಶದೆಲ್ಲೆಡೆ 71ನೇ ಸ್ವಾತಂತ್ರ್ಯ ದಿನಾಚರಣೆ: ಮುಗಿಲು ಮುಟ್ಟಿದ ದೇಶಪ್ರೇಮಿಗಳ ಸಂಭ್ರಮ

Published : Aug 15, 2017, 08:11 AM ISTUpdated : Apr 11, 2018, 01:02 PM IST
ದೇಶದೆಲ್ಲೆಡೆ 71ನೇ ಸ್ವಾತಂತ್ರ್ಯ ದಿನಾಚರಣೆ: ಮುಗಿಲು ಮುಟ್ಟಿದ ದೇಶಪ್ರೇಮಿಗಳ ಸಂಭ್ರಮ

ಸಾರಾಂಶ

ಇಂದು ದೇಶಾದ್ಯಂತ 71ನೇ ಸ್ವಾತಂತ್ರ್ಯ ದಿನಾಚರಣೆ.ದೇಶಾದ್ಯಂತ ಸ್ವಾತಂತ್ರ್ಯಸಂಭ್ರಮ ಮನೆ ಮಾಡಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದು ಬಿಗಿ ಭದ್ರತೆ ಮಾಡಲಾಗಿದೆ. ಇತ್ತ ರಾಜಧಾನಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಲಿದ್ದಾರೆ.

ನವದೆಹಲಿ(ಆ.15): ಇಂದು ದೇಶಾದ್ಯಂತ 71ನೇ ಸ್ವಾತಂತ್ರ್ಯ ದಿನಾಚರಣೆ.ದೇಶಾದ್ಯಂತ ಸ್ವಾತಂತ್ರ್ಯಸಂಭ್ರಮ ಮನೆ ಮಾಡಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದು ಬಿಗಿ ಭದ್ರತೆ ಮಾಡಲಾಗಿದೆ. ಇತ್ತ ರಾಜಧಾನಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಲಿದ್ದಾರೆ.

ಕೆಂಪುಕೋಟೆಯ ಮೇಲೆ ಪ್ರಧಾನಿ ಧ್ವಜಾರೋಹಣ

ಭಾರತದೆಲ್ಲೆಡೆ ಇಂದು 71ನೇ ಸ್ವಾತಂತ್ರ ದಿನಾಚರಣೆ. ಸ್ವಾತಂತ್ರ್ಯದ ಸಂಭ್ರಮ ಮುಗಿಲು ಮಟ್ಟಿದೆ.ಮಧ್ಯರಾತ್ರಿಯಿಂದಲೇ ಹಲವೆಡೆ ಧ್ವಜಾರೋಹಣ ನೆರವೇರಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿದ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ದೇಶ-ವಿದೇಶಗಳ ಗಣ್ಯರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ  ಕಮಾಂಡೊಗಳು, ಶಾರ್ಪ್ ಶೂಟರ್‌ಳನ್ನು ನಿಯೋಜಿಸಲಾಗಿದೆ. ಪಥಸಂಚಲನ ನಡೆಯುವ ಮಾರ್ಗದ ಮೇಲೆ ಹದ್ದಿನ ಕಣ್ಣಿನ ನಿಗಾ ಇಡಲು ಹೆಲಿಕಾಪ್ಟರ್ ಮತ್ತು ಡ್ರೋಣ್ ಪಹರೆಯನ್ನು ಹಾಕಲಾಗಿದೆ.

ಇತ್ತ ಬೆಂಗಳೂರಿನ  ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಲಿದ್ದಾರೆ. ಮೈದಾನದ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಗೆ 51 ಇನ್ಸ್​ಪೆಕ್ಟರ್, 92 ಸಬ್ ಇನ್ಸ್​ಪೆಕ್ಟರ್, ಮಹಿಳಾ ಪೇದೆಗಳು ಸೇರಿ ಒಟ್ಟು 1002  ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. 56 ಕ್ಕೂ ಹೆಚ್ಚು ಸಿಸಿಕ್ಯಾಮೆರಾ ಅಳವಡಿಸಲಾಗಿದೆ. ಮೈದಾನದ ಸುತ್ತ 8 ಸಶಸ್ತ್ರ ತುಕಡಿ ನಿಯೋಜನೆ ಮಾಡಲಾಗಿದೆ. ಅಲ್ದೇ ಗರುಡ ಕಮಾಂಡೋ ಪಡೆ ನಿಯೋಜನೆ ಮಾಡಲಾಗಿದೆ.

ಸ್ವಾತಂತ್ರ್ಯೋತ್ಸವದಂದು ಮೈದಾನದೊಳಗೆ ತಿಂಡಿ ತಿನಿಸು, ನೀರಿನ ಬಾಟಲಿ ಗಳು, ಮದ್ಯದ ಬಾಟೆಲ್, ಹೆಲ್ಮೆಟ್ ತರುವುದನ್ನು ನಿಷೇಧಿಸಲಾಗಿದೆ. ಜತಗೆ ಮಾಣಿಕ್ ಷಾ ಗ್ರೌಂಡ್ ಸುತ್ತಮುತ್ತಲಿನ ರಸ್ತೆಗಳ ಸಂಚಾರದಲ್ಲೂ ಬದಲಾವಣೆ ಮಾಡಲಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!