ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ : ಭೀಕರ ಅಪಘಾತದಲ್ಲಿ 8 ಮಂದಿ ದುರ್ಮರಣ

Published : Jun 17, 2018, 11:43 AM IST
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ : ಭೀಕರ ಅಪಘಾತದಲ್ಲಿ 8 ಮಂದಿ ದುರ್ಮರಣ

ಸಾರಾಂಶ

ಭಾನುವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಚಾಲಕನ ನಿಯಂತ್ರಣ ತಪ್ಪಿ  ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು ಸ್ಥಳದಲ್ಲೇ  8 ಮಂದಿ ದುರ್ಮರಣವನ್ನಪ್ಪಿದ್ದಾರೆ.   

ಕೋಲಾರ :   ಭಾನುವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಚಾಲಕನ ನಿಯಂತ್ರಣ ತಪ್ಪಿ  ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು ಸ್ಥಳದಲ್ಲೇ  8 ಮಂದಿ ದುರ್ಮರಣವನ್ನಪ್ಪಿದ್ದಾರೆ. 

 ಲಾರಿ ಚಾಲಕನ ನಿದ್ರಾ ಮಂಪರಿನಲ್ಲಿದ್ದುದರಿಂದ ಕಣಿವೆ ಅರಣ್ಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ್ದು,  ಆಂಧ್ರಪ್ರದೇಶ ದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲಂ ನಾಯನೂರು ಅರಣ್ಯ ಪ್ರದೇಶದಲ್ಲಿ ಅವಘಡ ಸಂಭವಿಸಿದೆ. 

ಮಾವಿನಕಾಯಿ ತುಂಬಿ ಕೊಂಡು, ತಮಿಳುನಾಡು ಕಡೆ ಹೋಗುತ್ತಿದ್ದ ಲಾರಿಯಲ್ಲಿ ಚಾಲಕ, ಕ್ಲಿನರ್, ಕೂಲಿಗಾರರು ಸೇರಿ ಎಂಟು ಜನರಿದ್ದು, 8ಮಂದಿಯೂ  ಧಾರುಣವಾಗಿ ಸಾವನ್ನಪ್ಪಿದ್ದಾರೆ. 

ಮೃತರ ಆರು ಜನರ ಗುರುತು ಪತ್ತೆ ಯಾಗಿದ್ದು,  ಘಟನಾ ಸ್ಥಳಕ್ಕೆ ಕುಪ್ಪಂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
ಮೋದಿ ರೀತಿ ರೈತರಿಗೆ ಟ್ರಂಪ್‌ ಹಣ ವರ್ಗಾವಣೆ