ಪದ್ಮನಾಭ ದೇಗುಲದಿಂದ 8 ವಜ್ರ ಮಾಯ!

Published : Jul 04, 2017, 12:04 AM ISTUpdated : Apr 11, 2018, 12:39 PM IST
ಪದ್ಮನಾಭ ದೇಗುಲದಿಂದ 8 ವಜ್ರ ಮಾಯ!

ಸಾರಾಂಶ

ನಾಪತ್ತೆಯಾದ ವಜ್ರಗಳು ದೈನಂದಿನ ಪೂಜಾಕೈಂಕರ್ಯದ ಪ್ರಮುಖ ಅಂಶಗಳು ಎಂದು ಪದ್ಮನಾಭ ಮಂದಿರದ ಆಡಳಿತದಲ್ಲಿ ಪಾರದರ್ಶಕತೆ ತರುವ ಪ್ರಕರಣದ ಮೇಲ್ವಿಚಾರಣೆ ಹೊತ್ತಿರುವ ಸುಪ್ರೀಂಗೆ ಅಮಿಕಸ್ ಕ್ಯೂರಿ ಮತ್ತು ಹಿರಿಯ ವಕೀಲರಾದ ಗೋಪಾಲ್ ಸುಬ್ರಮಣಿಯಂ ಹೇಳಿದ್ದಾರೆ

ತಿರುವನಂತಪುರ(ಜು.04): ದೇಶದ ಶ್ರೀಮಂತ ದೇಗುಲಗಳ ಪೈಕಿ ಒಂದಾ ಇಲ್ಲಿನ ಪ್ರಸಿದ್ಧ ಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ 8 ವಜ್ರಗಳು ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಅಪರಾಧ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್‌ಗೆ ಅಮಿಕಸ್ ಕ್ಯೂರಿ ತಿಳಿಸಿದ್ದಾರೆ. ನಾಪತ್ತೆಯಾದ ವಜ್ರಗಳು ದೈನಂದಿನ ಪೂಜಾಕೈಂಕರ್ಯದ ಪ್ರಮುಖ ಅಂಶಗಳು ಎಂದು ಪದ್ಮನಾಭ ಮಂದಿರದ ಆಡಳಿತದಲ್ಲಿ ಪಾರದರ್ಶಕತೆ ತರುವ ಪ್ರಕರಣದ ಮೇಲ್ವಿಚಾರಣೆ ಹೊತ್ತಿರುವ ಸುಪ್ರೀಂಗೆ ಅಮಿಕಸ್ ಕ್ಯೂರಿ ಮತ್ತು ಹಿರಿಯ ವಕೀಲರಾದ ಗೋಪಾಲ್ ಸುಬ್ರಮಣಿಯಂ ಹೇಳಿದ್ದಾರೆ. ದೇವಾಲಯದ ಗರ್ಭಗುಡಿಯಲ್ಲಿ ಇಡಲಾಗಿದ್ದ ವಜ್ರ ಕಾಣೆಯಾದ ಕುರಿತು ದೇಗುಲದ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎನ್.ಸತೀಶ್ ಅವರಿಂದ ಬಯಲಾಗಿದೆ. ದೇವಸ್ಥಾನಕ್ಕೆ ಬಂದ ಕಾಣಿಕೆಗಳನ್ನು ಪರಿಶೀಲನೆ ಮಾಡುವ ವೇಳೆ ಈ ಪ್ರಕರಣ ಬಯಲಿಗೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!