ರಾಜ್ಯದಲ್ಲಿ 8 ಲಕ್ಷ ನಕಲಿ ರೇಷನ್ ಕಾರ್ಡ್ ಪತ್ತೆ; ಸಚಿವ ಖಾದರ್

Published : Jan 04, 2018, 09:11 AM ISTUpdated : Apr 11, 2018, 12:35 PM IST
ರಾಜ್ಯದಲ್ಲಿ 8 ಲಕ್ಷ ನಕಲಿ ರೇಷನ್ ಕಾರ್ಡ್ ಪತ್ತೆ; ಸಚಿವ ಖಾದರ್

ಸಾರಾಂಶ

ಯೋಜನೆಯ ಯಶಸ್ವಿ ಅನುಷ್ಠಾನದಿಂದಾಗಿ ‘ಅನ್ನಭಾಗ್ಯ’ ಯೋಜನೆಯನ್ನು ‘ಕನ್ನಭಾಗ್ಯ’ ಯೋಜನೆ ಎಂದು ಮೂದಲಿಸುತ್ತಿದ್ದ ಬಿಜೆಪಿಯವರು ಅನ್ನಭಾಗ್ಯ ಯೋಜನೆಗೆ ನಮ್ಮ ಫೋಟೋ ಕೂಡ ಹಾಕಿ ಎಂದು ಹಿಂದೆ ಬಿದ್ದಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರು(ಜ.04): ‘ಅನ್ನಭಾಗ್ಯ’ದಡಿ ಹೊಸ ಪಡಿತರ ಚೀಟಿ ಪಡೆಯಲು ಆನ್'ಲೈನ್ ಅರ್ಜಿ ವ್ಯವಸ್ಥೆ ಹಾಗೂ ಪ್ರತಿ ತಿಂಗಳು ಪಡಿತರ ಪಡೆಯಲು ಬಯೋ ಮೆಟ್ರಿಕ್ ಕಡ್ಡಾಯಗೊಳಿಸುವುದರಿಂದ 7-8 ಲಕ್ಷ ನಕಲಿ ಕಾರ್ಡ್ ಪತ್ತೆ ಹಚ್ಚಲಾಗಿದೆ. ಜತೆಗೆ ನ್ಯಾಯಬೆಲೆ ಅಂಗಡಿಗಳ ಲೂಟಿಗೆ ಸಂಪೂರ್ಣ ಬ್ರೇಕ್ ಹಾಕುವ ಮೂಲಕ ನೂರಾರು ಕೋಟಿ ಸೋರಿಕೆ ತಡೆದಿದ್ದೇವೆ ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.

ಇದರಿಂದಾಗಿ ನ್ಯಾಯಬೆಲೆ ಅಂಗಡಿ ಮಾಲೀಕರೇ ಸಾರ್ವಜನಿಕರ ಬಳಿಗೆ ಹೋಗಿ ಪಡಿತರ ಪಡೆಯುವಂತೆ ಬೇಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಯೋಜನೆಯ ಯಶಸ್ವಿ ಅನುಷ್ಠಾನದಿಂದಾಗಿ ‘ಅನ್ನಭಾಗ್ಯ’ ಯೋಜನೆಯನ್ನು ‘ಕನ್ನಭಾಗ್ಯ’ ಯೋಜನೆ ಎಂದು ಮೂದಲಿಸುತ್ತಿದ್ದ ಬಿಜೆಪಿಯವರು ಅನ್ನಭಾಗ್ಯ ಯೋಜನೆಗೆ ನಮ್ಮ ಫೋಟೋ ಕೂಡ ಹಾಕಿ ಎಂದು ಹಿಂದೆ ಬಿದ್ದಿದ್ದಾರೆ ಎಂದು ಆರೋಪಿಸಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಟಿಕೆಟ್ ಬುಕ್ಕಿಂಗ್

ಬೆಂಗಳೂರು: ಪಡಿತರ ಹಂಚಿಕೆ ಕೇಂದ್ರಗಳಿಗೆ ಆನ್‌'ಲೈನ್ ಸಂಪರ್ಕ ಕಲ್ಪಿಸಿ ಮಾಹಿತಿ ಸಿಂಧು ಕೇಂದ್ರಗಳನ್ನಾಗಿ ಬದಲಿಸಲಾಗಿದೆ. ಈ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ವಿಮಾನ ಟಿಕೆಟ್, ರೈಲ್ವೆ ಟಿಕೆಟ್‌ನಂತಹ ಸೇವೆಗಳನ್ನೂ ಪಡೆಯಬಹುದು ಎಂದು ಪಡಿತರ ಸಚಿವ ಯು.ಟಿ. ಖಾದರ್ ಹೇಳಿದರು. ಇದಕ್ಕಾಗಿ ಕೇಂದ್ರ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ನ್ಯಾಯಬೆಲೆ ವಿತರಣೆ ಹಾಗೂ ಅರ್ಜಿ ಸಲ್ಲಿಕೆ ಮಾಡುವ ಕೆಲಸ ಇಲ್ಲದಿರುವಾಗ ಪಡಿತರ ಅಂಗಡಿಗಳು ಮಾಹಿತಿ ಕೇಂದ್ರಗಳಾಗಿ ಕೆಲಸ ಮಾಡಲಿವೆ. ಟಿಕೆಟ್ ಮಾರಾಟದಿಂದ ಬರುವ ಕಮಿಷನ್ ಪಡೆಯಲಿವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
India Latest News Live:ಇಂಡಿಗೋ ಏರ್‌ಲೈನ್ಸ್ ಸಮಸ್ಯೆ ತನಿಖೆಗೆ 4 ಸದಸ್ಯರ ತಂಡ ರಚಿಸಿದ ಕೇಂದ್ರ ಸರ್ಕಾರ