27 ರಿಂದ ಗೋವಾದಲ್ಲಿ 8 ನೇ ಹಿಂದೂ ರಾಷ್ಟ್ರ ಅಧಿವೇಶನ

Published : May 21, 2019, 09:55 AM IST
27 ರಿಂದ ಗೋವಾದಲ್ಲಿ 8 ನೇ  ಹಿಂದೂ ರಾಷ್ಟ್ರ ಅಧಿವೇಶನ

ಸಾರಾಂಶ

ಹಿಂದೂ ಸಮಾಜ ಜಾಗೃತಗೊಳಿಸುವ ಹಾಗೂ ಹಿಂದೂ ರಾಷ್ಟ್ರ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಮೇ 27ರಿಂದ ಜೂನ್‌ 8ರ ರವರೆಗೆ ಗೋವಾದ ಪೊಂಡಾದ ರಾಮನಾಥ ದೇವಸ್ಥಾನದಲ್ಲಿ ‘ಎಂಟನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಹಮ್ಮಿಕೊಳ್ಳಲಾಗಿದೆ. 

ಬೆಂಗಳೂರು (ಮೇ. 21):  ಹಿಂದೂ ಸಮಾಜ ಜಾಗೃತಗೊಳಿಸುವ ಹಾಗೂ ಹಿಂದೂ ರಾಷ್ಟ್ರ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಮೇ 27ರಿಂದ ಜೂನ್‌ 8ರ ರವರೆಗೆ ಗೋವಾದ ಪೊಂಡಾದ ರಾಮನಾಥ ದೇವಸ್ಥಾನದಲ್ಲಿ ‘ಎಂಟನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಮೋಹನ್‌ ಗೌಡ ತಿಳಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಬಾಂಗ್ಲಾದೇಶದ ಮೈನಾರಿಟಿ ವಾಚ್‌ನ ಅಧ್ಯಕ್ಷ ರವೀಂದ್ರ ಘೋಷ್‌, ರಾಮ ಮಂದಿರ ಆಂದೋಲನದ ಹಿರಿಯ ವಕೀಲ ಹರಿ ಶಂಕರ ಜೈನ್‌, ಸುಪ್ರೀಂ ಕೋರ್ಟ್‌ನ ವಕೀಲ ಜೆ.ಸಾಯಿದೀಪಕ್‌, ವಲ್ಡರ್ ಹಿಂದೂ ಫೆಡರೇಷನ್‌ನ ಅಜಯ್‌ ಸಿಂಹ, ಗೃಹ ಸಚಿವಾಲಯದ ನಿವೃತ್ತ ಅಧಿಕಾರಿ ಆರ್‌.ವಿ.ಎಸ್‌.ಮಣಿ, ಬಂಗಾಳದ ವಕೀಲ ಜಾಯದೀಪ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಹಿಂದೂ ಸಮಾಜ ಜಾಗೃತಗೊಳಿಸುವ ಹಾಗೂ ಹಿಂದೂ ರಾಷ್ಟ್ರದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿರುವ 13 ದಿನಗಳ ಅಧಿವೇಶನ ಅಧಿವೇಶನದಲ್ಲಿ ಬಾಂಗ್ಲಾದೇಶ ಸೇರಿದಂತೆ ದೇಶದ 26 ರಾಜ್ಯಗಳ 200ಕ್ಕೂ ಅಧಿಕ ಹಿಂದೂಪರ ಸಂಘಟನೆಗಳ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ದೇಶದಲ್ಲಿ ಅತಿಯಾಗಿರುವ ಭ್ರಷ್ಟಾಚಾರದ ತಡೆ ಹಾಗೂ ಭಾರತವನ್ನು ಸಂವಿಧಾನಾತ್ಮಕವಾಗಿ ಹಿಂದೂ ರಾಷ್ಟ್ರ ಎಂದು ಘೋಷಿಸುವ ನಿಟ್ಟಿನಲ್ಲಿ ಹೋರಾಟ ನಡೆಸಲು ಈ ಅಧಿವೇಶನದ ಸಂದರ್ಭದಲ್ಲಿಯೇ ‘ಧರ್ಮಪ್ರೇಮಿ ನ್ಯಾಯವಾದಿಗಳ ಅಧಿವೇಶನ’ ಏರ್ಪಡಿಸಲಾಗಿದೆ.

ಅಂತೆಯೆ ‘ಉದ್ಯಮಿಗಳ ಅಧಿವೇಶನ’, ಸೋಶಿಯಲ್‌ ಮೀಡಿಯಾ ಕಾನ್‌ಕ್ಲೇವ್‌’ ಹಾಗೂ ‘ಹಿಂದೂ ರಾಷ್ಟ್ರ ಸಂಘಟಕ ಪ್ರಶಿಕ್ಷಣ ಅಧಿವೇಶನ’ ಜರುಗಲಿದೆ ಎಂದು ತಿಳಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ