ವಾಹನ ಮಾಲೀಕರೆ ಎಚ್ಚರ : ಇಂತವರು ಇರ್ತಾರೆ!

Published : May 05, 2019, 08:32 AM IST
ವಾಹನ ಮಾಲೀಕರೆ ಎಚ್ಚರ : ಇಂತವರು ಇರ್ತಾರೆ!

ಸಾರಾಂಶ

ಬೆಂಗಳೂರಿನ ವಾಹನ ಮಾಲಿಕರೆ ಎಚ್ಚರ. ಇಂತವರು ನಗರದಲ್ಲಿದ್ದಾರೆ..

ಬೆಂಗಳೂರು :  ರಾತ್ರಿ ಪಾಳಿ ಕರ್ತವ್ಯ ಮುಗಿಸಿ ರಸ್ತೆ ಬದಿ ಬಿಎಂಟಿಸಿ ಬಸ್‌ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ನಿದ್ರೆಗೆ ಜಾರಿದ್ದ ವೇಳೆ ಬಸ್‌ನ ಡಿಸೇಲ್‌ ಕಳವು ಮಾಡಿರುವ ಘಟನೆ ನಡೆದಿದೆ.

ಈ ಸಂಬಂಧ 80 ಲೀಟರ್‌ ಡಿಸೇಲ್‌ ಕಳವು ಮಾಡಲಾಗಿದೆ ಎಂದು ಬಿಎಂಟಿಸಿ ಬಸ್‌ ಚಾಲಕ ಗುರುಸ್ವಾಮಿ ಅವರು ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ಗುರುಸ್ವಾಮಿ ಬಿಎಂಟಿಸಿ 8ನೇ ಡಿಪೋನ ಚಾಲಕರಾಗಿದ್ದು, ಮೇ 2 ರಂದು ರಾತ್ರಿ ಡಿಪೋನಲ್ಲಿ ಡಿಸೇಲ್‌ ಭರ್ತಿ ತುಂಬಿಸಿಕೊಂಡು ನಿರ್ವಾಹಕ ಮಂಜುನಾಥ್‌ ಜತೆ ರೂಟ್‌ ಮೇಲೆ ತೆರಳಿದ್ದರು. ರಾತ್ರಿ 11.10ರ ಸುಮಾರಿಗೆ ಬಿಇಎಂಎಲ್‌ ಕಾರ್ಖಾನೆಯಿಂದ ನೌಕರರನ್ನು ಪಿಕಪ್‌ ಮಾಡಿ, ಬೋನ್‌ ಮಿಲ್‌ ಹೆಸರುಘಟ್ಟರಸ್ತೆಯಲ್ಲಿ ಕೊನೆಯದಾಗಿ ನೌಕರರನ್ನು ಇಳಿಸಿದ್ದರು. ಬಳಿಕ ಸೋಲದೇವನಹಳ್ಳಿಯ ರಾಜ್‌ ಬಿರಿಯಾನಿ ಹೋಟೆಲ್‌ ಮುಂಭಾಗ ರಾತ್ರಿ 12.30ರ ಸುಮಾರಿಗೆ ಬಸ್‌ನ್ನು ರಸ್ತೆ ಬದಿ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ನಿದ್ರೆಗೆ ಜಾರಿದ್ದರು.

ಮರು ದಿನ ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಚಿಕ್ಕಬಾಣಾವಾರದಲ್ಲಿ ಬಿಇಎಂಎಲ್‌ ನೌಕರರನ್ನು ಪಿಕಪ್‌ ಮಾಡಿಕೊಂಡು ಹೋಗುವಾಗ ಸಪ್ತಗಿರಿ ಆಸ್ಪತ್ರೆ ಬಳಿ ಬಸ್‌ ಏಕಾಏಕಿ ನಿಂತು ಬಿಟ್ಟಿದೆ. ಬಸ್‌ ರಿಪೇರಿ ಆಗಿದೆ ಎಂದು ಚಾಲಕ ಡಿಪೋಗೆ ಮಾಹಿತಿ ನೀಡಿದ್ದು, ಮೆಕ್ಯಾನಿಕ್‌ ಬಂದು ಪರಿಶೀಲನೆ ನಡೆಸಿದಾಗ ಡಿಸೇಲ್‌ ಖಾಲಿಯಾಗಿದೆ ಎಂದು ಹೇಳಿದ್ದರು. ಇದರಿಂದ ಆತಂಕಗೊಂಡ ಚಾಲಕ 80 ಲೀ. ಡೀಸೆಲ್‌ನ್ನು ಕಳವು ಆಗಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದಾರೆ. 

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳೀಯ ಸಿಸಿಟಿವಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು