
ಮುಂಬೈ(ಡಿ.11): ಪುಟ್ಟ ಮಕ್ಕಳು ಶಾಲೆಗೆ ಹೋಗಿ ಮನೆಗೆ ಮರಳುವವರೆಗೂ ಕೂಡ ಪೋಷಕರ ಮನದಲ್ಲಿ ಆತಂಕ ಎನ್ನುವುದು ಇಂದಿನ ದಿನಮಾನಗಳಲ್ಲಿ ಸಾಮಾನ್ಯವಾಗಿದೆ. ಹಳ್ಳಿ ನಗರಗಳೆನ್ನದೇ ಎಲ್ಲೆಡೆಯೂ ಕೂಡ ನಡೆಯುತ್ತಿರುವ ಅಹಿತಕರ ಘಟನೆಗಳೇ ಇದಕ್ಕೆ ಕಾರಣವಾಗಿದೆ.
ಮುಂಬೈ ಪೋಷಕರು ಶಾಲೆಯಲ್ಲಿ ಮಕ್ಕಳು ಸುರಕ್ಷಿತವಾಗಿರುತ್ತಾರೆ ಎನ್ನುವ ಭಾವನೆ ಹೆಚ್ಚು ಹೊಂದಿದ್ದಾರಂತೆ. ದೇಶದ ಬೇರೆ ಪ್ರದೇಶಗಳಿಗೆ ಹೋಲಿಕೆ ಮಾಡಿದಾಗ ಮುಂಬೈ ಪೋಷಕರಲ್ಲಿ ಶಾಲೆಗೆ ಹೋದ ಮಕ್ಕಳ ಬಗ್ಗೆ ಸುರಕ್ಷಿತ ಭಾವ ಹೆಚ್ಚಿದೆಯಂತೆ.
ಶೇ.80ರಷ್ಟು ಮುಂಬೈ ಪೋಷಕರು ಶಾಲೆಗೆ ಹೋದ ಮಕ್ಕಳು ಸುರಕ್ಷಿತವಾಗಿರುತ್ತಾರೆ ಎಂದು ಭಾವಿಸುತ್ತಾರೆ ಎಂದು ಚೈಲ್ಡ್ ರೈಟ್ ಎಂಬ ಎನ್’ಜಿಒ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
ಈ ಸಂಸ್ಥೆಯೂ ಭಾರತದ ಅನೇಕ ನಗರಗಳಲ್ಲಿ 3 ರಿಂದ 14 ವರ್ಷ ವಯಸ್ಸಿನ ಮಕ್ಕಳ ಪೋಷಕರನ್ನು ಸಮೀಕ್ಷೆಗೆ ಒಳಪಡಿಸಿದೆ. ಎಲ್ಲಾ ವರ್ಗದ ಜನರನ್ನೂ ಕೂಡ ಸಂದರ್ಶನ ಮಾಡಲಾಗಿದೆ.
ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ ಹೇಳುವ ಪ್ರಕಾರ ಕಳೆದ ದಶಕಗಳಿಗಿಂತ ಈ ದಶಕದಲ್ಲಿ ಮಕ್ಕಳ ವಿರುದ್ಧದ ಅಪರಾಧ ಪ್ರಕರಣಗಳು ಹೆಚ್ಚಿವೆ ಎನ್ನುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.