ಕರ್ನಾಟಕಕ್ಕಿದು ಆತಂಕದ ಸಂಗತಿ

Published : Dec 22, 2018, 07:31 AM IST
ಕರ್ನಾಟಕಕ್ಕಿದು ಆತಂಕದ ಸಂಗತಿ

ಸಾರಾಂಶ

ಕರ್ನಾಟಕಕ್ಕೆ ಇದೊಂದು ಆತಂಕದ ಸಂಗತಿಯಾಗಿದೆ. ಸದ್ಯ ರಾಜ್ಯದಲ್ಲಿ ಶೇ.80ರಷ್ಟು ಜಿಲ್ಲೆಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ. 

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ 6 ರಾಜ್ಯಗಳು ಈ ವರ್ಷ ಭೀಕರ ಬರಗಾಲಕ್ಕೆ ಒಳಗಾಗಿದೆ. ಅದರಲ್ಲೂ ಕರ್ನಾಟಕದ 30 ಜಿಲ್ಲೆಗಳ ಪೈಕಿ 24 ಜಿಲ್ಲೆಗಳಲ್ಲಿ ಕ್ಷಾಮವಿದ್ದು, ಒಟ್ಟಾರೆ ಶೇ.80ರಷ್ಟು ಕರ್ನಾಟಕದಲ್ಲಿ ನೀರಿನ ಕೊರತೆ ಹಾಗೂ ಬೆಳೆ ವೈಫಲ್ಯ ಕಂಡುಬಂದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ದೇಶದಲ್ಲೇ ಹೆಚ್ಚಿನ ಪ್ರಮಾಣದ ಬರ ಕರ್ನಾಟಕದಲ್ಲಿ ಕಂಡುಬಂದಿದ್ದರೆ, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ ಇದೆ. ಈ ರಾಜ್ಯದ ೩೬ ಜಿಲ್ಲೆಗಳ ಪೈಕಿ 26 ರಲ್ಲಿ ಬರಗಾಲವಿದೆ. ಒಟ್ಟಾರೆ ಶೇ. 72 ಮಹಾರಾಷ್ಟ್ರ ಕ್ಷಾಮಕ್ಕೆ ತುತ್ತಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ. ಕರ್ನಾಟಕ, ಮಹಾರಾಷ್ಟ್ರ ಮಾತ್ರವೇ ಅಲ್ಲದೆ ಆಂಧ್ರಪ್ರದೇಶ, ಜಾರ್ಖಂಡ್, ಗುಜರಾತ್ ಹಾಗೂ ರಾಜಸ್ಥಾನ ರಾಜ್ಯಗಳು ಬರಕ್ಕೆ ತುತ್ತಾಗಿವೆ. ಈ 6 ರಾಜ್ಯಗಳಲ್ಲಿ 1.95 ಕೋಟಿ ಹೆಕ್ಟೇರ್ ಬೆಳೆ ನಾಶವಾಗಿದ್ದು, ರಾಜ್ಯ ಸರ್ಕಾರಗಳು 16773 ಕೋಟಿ ರು. ಕೇಂದ್ರೀಯ ನೆರವಿಗೆ ಮೊರೆ ಇಟ್ಟಿವೆ ಎಂದು ಲೋಕಸಭೆಗೆ ಕೇಂದ್ರ ಕೃಷಿ ಸಚಿವ ರಾಧಾ ಮೋಹನ ಸಿಂಗ್ ಲಿಖಿತ ಉತ್ತರ ನೀಡಿದ್ದಾರೆ.

ಭಾರೀ ಬರದ ಹಿನ್ನೆಲೆಯಲ್ಲಿ 6 ರಾಜ್ಯಗಳು, ಕೇಂದ್ರದ ನೆರವು ಕೋರಿವೆ. ಈ ಹಿನ್ನೆಲೆಯಲ್ಲಿ ಅಂತರ್ ಸಚಿವಾಲಯದ ಮಟ್ಟದ ಸಮಿತಿ ಯನ್ನು ರಚಿಸಲಾಗಿದೆ. ಈ ಸಮಿತಿಗಳು ಬರಪೀಡಿತ ರಾಜ್ಯಗಳಿಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ, ಪರಿಹಾರದ ಪ್ರಮಾಣದ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗರ್ಭಧರಿಸಿ 9 ತಿಂಗಳು ಪೂರೈಸಿದ ಹಸುವಿಗೆ ಸೀಮಂತ ಮಾಡಿದ ಮಂಡ್ಯ ರೈತ
ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌