84ನೇ ಸಾಹಿತ್ಯ ಸಮ್ಮೇಳನ ಮುಂದೂಡುವ ಸಾಧ್ಯತೆ

Published : Oct 17, 2018, 07:09 PM IST
84ನೇ ಸಾಹಿತ್ಯ ಸಮ್ಮೇಳನ ಮುಂದೂಡುವ ಸಾಧ್ಯತೆ

ಸಾರಾಂಶ

ಸಮ್ಮೇಳನ ಅವಸರದಲ್ಲಿ ಆಗುವುದು ಬೇಡ. ಜನವರಿ ತಿಂಗಳಲ್ಲಿ ಮಾಡುವುದು ಸೂಕ್ತ ಎಂಬ ಅಭಿಪ್ರಾಯಗಳು ಕಾರ್ಯಕಾರಿ ಸಭೆಯಲ್ಲಿ ಕೇಳಿ ಬಂದಿರುವ ಕಾರಣ ಸಮ್ಮೇಳನ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. 

ಧಾರವಾಡ[ಅ.17]: ಧಾರವಾಡದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಮುಂದೂಡುವ ಸಾಧ್ಯತೆಯಿದೆ. 

ಸಮ್ಮೇಳನ ಅವಸರದಲ್ಲಿ ಆಗುವುದು ಬೇಡ. ಜನವರಿ ತಿಂಗಳಲ್ಲಿ ಮಾಡುವುದು ಸೂಕ್ತ ಎಂಬ ಅಭಿಪ್ರಾಯಗಳು ಕಾರ್ಯಕಾರಿ ಸಭೆಯಲ್ಲಿ ಕೇಳಿ ಬಂದಿರುವ ಕಾರಣ ಸಮ್ಮೇಳನ ಮುಂದಕ್ಕೆ ಹೋಗುವ ಸಾಧ್ಯತೆಯಿದೆ. ಈಗಾಗಲೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ್​ ಕಂಬಾರ್​ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಮೊದಲು ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 7 ಮತ್ತು ಡಿಸೆಂಬರ್ 8ರಂದು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಎಲ್ಲ ರೀತಿಯ ರೂಪುರೇಷೆ, ತಯಾರಿ ಮಾಡಿಕೊಳ್ಳದೆ ಆತುರವಾಗಿ ಹಮ್ಮಿಕೊಳ್ಳುವುದು ಬೇಡ ಎಂಬ ಸಲಹೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಸಮ್ಮೇಳನ ಮುಂದಕ್ಕೆ ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.

84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಚಂದ್ರಶೇಖರ ಕಂಬಾರ್​ ಆಯ್ಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದಿ ಹೇರಿಕೆ ಬಗ್ಗೆ ನ್ಯಾ। ನಾಗರತ್ನ ಬೇಸರ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ