
ಇಟಾನಗರ(ನ.30): ಮುಖ್ಯ ಶಿಕ್ಷಕರ ವಿರುದ್ಧ ಕೆಟ್ಟದಾಗಿ ಬರದ ಕಾರಣಕ್ಕಾಗಿ 88 ವಿದ್ಯಾರ್ಥಿನಿಯರ ಬಟ್ಟೆಯನ್ನು ಮೂವರು ಶಿಕ್ಷಕರು ಬಲವಂತವಾಗಿ ಬಿಚ್ಚಿಸಿ ಅಮಾನವೀಯ ಕೃತ್ಯ ಮೆರೆದ ಘಟನೆ ಅರುಣಾಚಲ ಪ್ರದೇಶ ಪಾಪುಂ ಪರ್ರೆ ಜಿಲ್ಲೆಯ ಗಾಂಧಿ ಬಾಲಿಕ ವಿದ್ಯಾಲಯದಲ್ಲಿ ನಡೆದಿದೆ.
ಬಟ್ಟೆ ಬಿಚ್ಚಿದ ವಿದ್ಯಾರ್ಥಿಗಳೆಲ್ಲರೂ 6 ಹಾಗೂ 7ನೇ ವಿದ್ಯಾರ್ಥಿಗಳಾಗಿದ್ದಾರೆ. ನ.23ರಂದು ಈ ಘಟನೆ ನಡೆದಿದ್ದು ಅಲ್ಲಿನ ಸ್ಥಳೀಯ ವಿದ್ಯಾರ್ಥಿ ಸಂಘಟನೆ ಪೊಲೀಸರಿಗೆ ದೂರು ಸಲ್ಲಿಸಿದ್ದು ಎಫ್'ಐ'ಆರ್ ದಾಖಲಾಗಿದೆ. ಮುಖ್ಯ ಶಿಕ್ಷಕರು ಹಾಗೂ ಓರ್ವ ವಿದ್ಯಾರ್ಥಿನಿಯ ವಿರುದ್ಧ ಕೆಟ್ಟ ಬಾಷೆ ಪ್ರಯೋಗಿಸಿದ ಕಾರಣ ಇಬ್ಬರು ಸಹಾಯಕ ಹಾಗೂ ಓರ್ವ ಕಿರಿಯ ಶಿಕ್ಷಕ ಈ ಕೃತ್ಯವೆಸಗಿದ್ದಾರೆ.
ಬಟ್ಟೆ ಬಿಚ್ಚಿಸಿದ ಪ್ರಕರಣವನ್ನು ಹಲವು ವಿದ್ಯಾರ್ಥಿ ಸಂಘಟನೆಗಳು ಖಂಡಿಸಿದ್ದು ಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.